ರಾಜ್ಯದ ಎಲ್ಲ ಕಟ್ಟಡ ಕಾರ್ಮಿಕರಿಗೂ ರೇಷನ್ ಕಿಟ್ ವಿತರಿಸಬೇಕು. ಕೋವಿಡ್ ಸೇನಾನಿಗಳಿಗೂ ಆರ್ಥಿಕ ಭದ್ರತೆ ಒದಗಿಸಬೇಕು. ಸಾರಿಗೆ ನೌಕರರ ಮೇಲಿನ ಎಸ್ಮಾ ಕಾನೂನು ವಿಸ್ತರಣೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಅಧ್ಯಕ್ಷ ಆರ್. ಭಾಸ್ಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ. ಗೋಪಾಲ್, ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ, ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಎನ್. ಯಲ್ಲಾಲಿಂಗ ಇತರರಿದ್ದರು.