ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಡದ ಮೊತ್ತ ಕಡಿತಕ್ಕೆ ಗುತ್ತಿಗೆದಾರರ ಆಗ್ರಹ

Last Updated 12 ಸೆಪ್ಟೆಂಬರ್ 2022, 14:11 IST
ಅಕ್ಷರ ಗಾತ್ರ

ಹೊಸಪೇಟೆ: ಅವಧಿ ಮುಗಿದ ನಂತರ ನಿರ್ವಹಿಸುವ ಕಾಮಗಾರಿಯ ದಂಡದ ಮೊತ್ತ ಕಡಿತಗೊಳಿಸಬೇಕೆಂದು ಜಿಲ್ಲಾ ಸಿವಿಲ್‌ ಗುತ್ತಿಗೆದಾರರು ಆಗ್ರಹಿಸಿದರು.

ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು. ಅವಧಿ ಮೀರಿದ್ದಕ್ಕೆ ದಂಡ ಹಾಕುತ್ತಿರುವುದರಿಂದ ಗುತ್ತಿಗೆದಾರರು ತೊಂದರೆ ಅನುಭವಿಸುತ್ತಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಅದನ್ನು ಕಡಿತಗೊಳಿಸಬೇಕು. ಕೆ.ಕೆ.ಆರ್‌.ಡಿ.ಬಿ ಹಾಗೂ ಜಿಲ್ಲಾ ಖನಿಜ ನಿಧಿಯಲ್ಲಿ ಪೂರ್ಣಗೊಳಿಸಿದ ಕಾಮಗಾರಿಗಳ ಬಿಲ್‌ ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಬೇಕು. ಹೋಬಳಿ ಅಥವಾ ತಾಲ್ಲೂಕಿನಲ್ಲಿ ಗ್ರಾವೆಲ್‌ ತೆಗೆಯಲು ಅವಕಾಶ ಮಾಡಿಕೊಡಬೇಕು. ಈ ಹಿಂದೆ ನಿರ್ವಹಿಸಿದ ಕಾಮಗಾರಿಗಳ ಗುಣಮಟ್ಟವನ್ನು ಮೂರನೇ ವ್ಯಕ್ತಿಯಿಂದ ಪರೀಕ್ಷಿಸಲಾಗಿದೆ. ಮತ್ತೆ ಹೊಸಬರಿಂದ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ. ಇದರಿಂದ ಅನಗತ್ಯ ವಿಳಂಬವಾಗುತ್ತಿದೆ ಎಂದು ಗೋಳು ತೋಡಿಕೊಂಡಿದ್ದಾರೆ.

ಗುತ್ತಿಗೆದಾರರಾದ ಆರ್‌. ಕೇಶವ ರೆಡ್ಡಿ, ಕೆ. ತಿಪ್ಪೇಸ್ವಾಮಿ, ಬಿ. ಚಂದ್ರಶೇಖರ್‌, ನಾಗರಾಜ, ವೆಂಕಟೇಶ, ಮಲ್ಲೇಶ್‌ ರಾಜೇಂದ್ರ ಪ್ರಸಾದ್‌, ದೇವಿಪ್ರಸಾದ್‌, ಲಿಂಗಾರೆಡ್ಡಿ, ಕಾಳಿ ಬಸವರಾಜ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT