ಕನಕದಾಸ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಬಳ್ಳಾರಿಗೆ ಆಗಮಿಸಿದ್ದಸಿದ್ದರಾಮಯ್ಯ ಅವರನ್ನುಸಮನ್ವಯ ಸಮಿತಿ ನಿರ್ಧರಿಸಿದರೆ ನೀವು ಮತ್ತೆ ಮುಖ್ಯಮಂತ್ರಿಯಾಗುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅದೆಲ್ಲ ಸಮಿತಿಯಲ್ಲಿ ಚರ್ಚೆಯಾಗಲ್ಲ’ಎಂದರು.
ಜೆಡಿಎಸ್ ಅನ್ನು ಬೆಂಬಲಿಸಬೇಕೆನ್ನುವುದು ಕಾಂಗ್ರೆಸ್ ಹೈಮಾಂಡ್ ತೀರ್ಮಾನ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಅವರನ್ನು ಸಮಿತಿಗೆ ಸೇರ್ಪಡೆಗೊಳಿಸುವ ವಿಚಾರವೂ ಹೈಕಮಾಂಡ್ಗೆ ಬಿಟ್ಟಿರುವ ವಿಚಾರ ಎಂದು ಸುದ್ದಿಗಾರರಿಗೆ ತಿಳಿಸಿದರು.