ಬಳ್ಳಾರಿ: ಕೊರೊನಾ ಸೋಂಕಿನಿಂದ ಗುಣಮುಖರಾಗಿ ನಗರದ ಕೋವಿಡ್-19 ಆಸ್ಪತ್ರೆಯಿಂದ ಗುರುವಾರ ಹೊರಬಂದ ಪಿ-89,ಪಿ-91&ಪಿ-141 ಅವರನ್ನು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಬಸರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜನಾರ್ಧನ್, ವಿಮ್ಸ್ ನಿರ್ದೇಶಕ ಡಾ.ಬಿ. ದೇವಾನಂದ ತಂಡದವರು ವಿಜಯದ ಸಂಕೇತ ತೋರಿಸಿದರು.