ಸಂತೆ ನಡೆಯುತ್ತಿರುವ ವಿಷಯ ಇದೀಗ ಗಮನಕ್ಕೆ ಬಂದಿದ್ದು, ಪೊಲೀಸರನ್ನು ಸ್ಥಳಕ್ಕೆ ಕಳಿಸಿ ಸಂತೆ ಬಂದ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಸ್. ಮಹಾಬಲೇಶ್ವರ ತಿಳಿಸಿದ್ದಾರೆ.
ಕೊರೊನಾ ಸೋಂಕು ಹರಡದಂತೆ ಸಂತೆಯನ್ನು ನಿಲ್ಲಿಸಲಾಗಿದೆ. ಈ ಬಗ್ಗೆ ಒಂದು ವಾರದಿಂದಲೇ ಡಂಗೂರು ಸಾರಿಸಿ ಜಾಗೃತಿ ಮೂಡಿಸಲಾಗಿದೆ. ಆದರೂ ಜನರು ಸಂತೆಯಲ್ಲಿ ಸೇರಿದ್ದು, ಅವರನ್ನು ಖಾಲಿ ಮಾಡಿಸಲು ಮುಂದಾಗಿದ್ದೇವೆ ಎಂದು ಮಾಕನಾಡಕು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂ. ಪ್ರಶಾಂತ ಪ್ರತಿಕ್ರಿಯಿಸಿದ್ದಾರೆ.