<p><strong>ಬಳ್ಳಾರಿ</strong>: 31ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ ಮಾಡಿರುವ ಜಿಲ್ಲಾಡಳಿತ ಮೇ 24 ಮತ್ತು 25 ರಂದು ಮಧ್ಯಾಹ್ನ 12 ಗಂಟೆಯವರೆಗೆ ದಿನಬಳಕೆ ವಸ್ತುಗಳ ಖರೀದಿಗೆ ಅವಕಾಶ ನೀಡಿರುವುದಿಂದ ಎಲ್ಲೆಡೆ ನೂಕು ನುಗ್ಗಲು ಏರ್ಪಟ್ಟಿತ್ತು.</p>.<p>ಹಣ್ಣು ತರಕಾರಿಗಳ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೊರಡಿಸಿದ್ದ ಆದೇಶಕ್ಕೆ ಬಹುತೇಕ ಚಿಲ್ಲರೆ ತರಕಾರಿ ವ್ಯಾಪಾರಿಗಳು ಕಿಮ್ಮತ್ತು ನೀಡದೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರು.</p>.<p>ಬೀನ್ಸ್ ಪ್ರತಿ ಕೆಜಿಗೆ ಜಿಲ್ಲಾಧಿಕಾರಿಯು ₹ 50 ನಿಗದಿ ಮಾಡಿದ್ದರೆ ಮಾರಾಟಗಾರರು ₹ 200 ಕ್ಕೆ ಮಾರಿದರು. ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದ್ದರಿಂದ ಬಹಳಷ್ಟು ತರಕಾರಿಗಳ ಬೆಲೆ ಮೂರ್ನಾಲ್ಕು ಪಟ್ಟು ಹೆಚ್ಚಿತ್ತು.</p>.<p>ತಾತ್ಕಾಲಿಕ ಮಾರುಕಟ್ಟೆಗಳಲ್ಲಿ ಜನ ಪರಸ್ಪರ ಅಂತರ ಮರೆತು ಹಣ್ಣು- ತರಕಾರಿ ಖರೀದಿಸಿದರು. ಜನರ ಗುಂಪುಗೂಡುವಿಕೆಯನ್ನು ನಿಯಂತ್ರಿಸಲಾಗದೆ ಪೊಲೀಸರು ಪರದಾಡಿದರು.</p>.<p>ನಗರದ ಸೂಪರ್ ಮಾರ್ಕೆಟ್ ಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿದ್ದರಿಂದ ನೂರಾರು ಜನರು ಉದ್ದನೆಯ ಸಾಲಿನಲ್ಲಿ ಗಂಟೆಗಟ್ಟಳೆ ಕಾಯಬೇಕಾಯಿತು.</p>.<p>ನಗರದ ಪ್ರಮುಖ ರಸ್ತೆ- ವೃತ್ತಗಳಲ್ಲಿ ವಾಹನ ಸಂಚಾರ ಹೆಚ್ಚಿತ್ತು.</p>.<p>ಜೋಡಿ ರಸ್ತೆಗಳಲ್ಲಿ ಒಂದು ರಸ್ತೆಯನ್ನು ಮುಚ್ಚಿ, ಇನ್ನೊಂದು ರಸ್ತೆಯಲ್ಲಿ ಮಾತ್ರ ದ್ಚಿಮುಖ ಸಂಚಾರಕ್ಕೆ ಅನುವು ಮಾಡಿದ್ದರಿಂದ ಹಲವೆಡೆ ವಾಹನ ಸವಾರರು ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: 31ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ ಮಾಡಿರುವ ಜಿಲ್ಲಾಡಳಿತ ಮೇ 24 ಮತ್ತು 25 ರಂದು ಮಧ್ಯಾಹ್ನ 12 ಗಂಟೆಯವರೆಗೆ ದಿನಬಳಕೆ ವಸ್ತುಗಳ ಖರೀದಿಗೆ ಅವಕಾಶ ನೀಡಿರುವುದಿಂದ ಎಲ್ಲೆಡೆ ನೂಕು ನುಗ್ಗಲು ಏರ್ಪಟ್ಟಿತ್ತು.</p>.<p>ಹಣ್ಣು ತರಕಾರಿಗಳ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೊರಡಿಸಿದ್ದ ಆದೇಶಕ್ಕೆ ಬಹುತೇಕ ಚಿಲ್ಲರೆ ತರಕಾರಿ ವ್ಯಾಪಾರಿಗಳು ಕಿಮ್ಮತ್ತು ನೀಡದೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರು.</p>.<p>ಬೀನ್ಸ್ ಪ್ರತಿ ಕೆಜಿಗೆ ಜಿಲ್ಲಾಧಿಕಾರಿಯು ₹ 50 ನಿಗದಿ ಮಾಡಿದ್ದರೆ ಮಾರಾಟಗಾರರು ₹ 200 ಕ್ಕೆ ಮಾರಿದರು. ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದ್ದರಿಂದ ಬಹಳಷ್ಟು ತರಕಾರಿಗಳ ಬೆಲೆ ಮೂರ್ನಾಲ್ಕು ಪಟ್ಟು ಹೆಚ್ಚಿತ್ತು.</p>.<p>ತಾತ್ಕಾಲಿಕ ಮಾರುಕಟ್ಟೆಗಳಲ್ಲಿ ಜನ ಪರಸ್ಪರ ಅಂತರ ಮರೆತು ಹಣ್ಣು- ತರಕಾರಿ ಖರೀದಿಸಿದರು. ಜನರ ಗುಂಪುಗೂಡುವಿಕೆಯನ್ನು ನಿಯಂತ್ರಿಸಲಾಗದೆ ಪೊಲೀಸರು ಪರದಾಡಿದರು.</p>.<p>ನಗರದ ಸೂಪರ್ ಮಾರ್ಕೆಟ್ ಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿದ್ದರಿಂದ ನೂರಾರು ಜನರು ಉದ್ದನೆಯ ಸಾಲಿನಲ್ಲಿ ಗಂಟೆಗಟ್ಟಳೆ ಕಾಯಬೇಕಾಯಿತು.</p>.<p>ನಗರದ ಪ್ರಮುಖ ರಸ್ತೆ- ವೃತ್ತಗಳಲ್ಲಿ ವಾಹನ ಸಂಚಾರ ಹೆಚ್ಚಿತ್ತು.</p>.<p>ಜೋಡಿ ರಸ್ತೆಗಳಲ್ಲಿ ಒಂದು ರಸ್ತೆಯನ್ನು ಮುಚ್ಚಿ, ಇನ್ನೊಂದು ರಸ್ತೆಯಲ್ಲಿ ಮಾತ್ರ ದ್ಚಿಮುಖ ಸಂಚಾರಕ್ಕೆ ಅನುವು ಮಾಡಿದ್ದರಿಂದ ಹಲವೆಡೆ ವಾಹನ ಸವಾರರು ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>