<p><strong>ಬಳ್ಳಾರಿ:</strong> ಕೊರೊನ ಸೋಂಕಿನಿಂದ ಮೃತಪಟ್ಟ ಮೂವರ ಶವಗಳನ್ನು ಪಿಪಿಇ ಕಿಟ್ ಧರಿಸಿದ ಸಿಬ್ಬಂದಿ ವ್ಯಾನ್ ನಿಂದ ಎಳೆದು ತಂದು ಒಂದೇ ಗುಂಡಿಗೆ ಎಸೆಯುವ 1 ನಿಮಿಷ 28 ಸೆಕೆಂಡಿನ ವೀಡಿಯೋ ಜಿಲ್ಲೆಗೆ ಸಂಬಂಧಿಸಿದ್ದು, ಈ ಘಟನೆಗಾಗಿ ಜಿಲ್ಲಾಡಳಿತವು ಮೃತರ ಸಂಬಂಧಿಕರಲ್ಲಿ ಹಾಗೂ ಜಿಲ್ಲೆಯ ಜನರಲ್ಲಿ ಬೇಷರತ್ ಆಗಿ ಕ್ಷಮೆ ಯಾಚಿಸುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆಯಿಂದಲೇ ಜಿಲ್ಲೆಯ ವಾಟ್ಸ್ಯಾಪ್ ಗುಂಪುಗಳಲ್ಲಿ ವೀಡಿಯೊ ಹರಿದಾಡಿದ ಬಳಿಕ ಅವರು ಹೆಚ್ಚುವರಿ ಜಿಲ್ಲಾಧಿಕಾರಿಗೆ ತನಿಖೆ ನಡೆಸುವಂತೆ ಸೂಚಿಸಿದ್ದರು.</p>.<p>'ತನಿಖೆಯಲ್ಲಿ, ವೀಡಿಯೋ ಬಳ್ಳಾರಿಯಲ್ಲಿ ನಡೆದಿದ್ದ ಅಂತ್ಯಸಂಸ್ಕಾರದ್ದೇ ಆಗಿರುವುದು ದೃಢಪಟ್ಟಿದೆ. ಶವಗಳನ್ನು ಸೋಂಕು ಹರಡದಂತೆ ಸಂಪೂರ್ಣ ಮುಚ್ಚಲಾಗಿತ್ತು. ಆದರೆ ಅವುಗಳನ್ನು ಗುಂಡಿಗೆ ಎಸೆದಿರುವುದು ವಿಷಾದನೀಯ ವರ್ತನೆಯಾಗಿದೆ.ಇದನ್ನು ಜಿಲ್ಲಾಡಳಿತ ಖಂಡಿಸುತ್ತದೆ' ಎಂದಿದ್ದಾರೆ.</p>.<p>'ಅಗೌರವಯುತವಾಗಿ ಅಂತಿಮ ಸಂಸ್ಕಾರ ನಡೆಸಿದ ತಂಡವನ್ನು ಬದಲಾಯಿಸಿದ್ದು, ವಿಮ್ಸ್ ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ಮುಖ್ಯಸ್ಥರ ನೇತೃತ್ವದಲ್ಲಿ ತರಬೇತಿ ಪಡೆದವರನ್ನು ನಿಯೋಜಿಸಲಾಗುವುದು' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕೊರೊನ ಸೋಂಕಿನಿಂದ ಮೃತಪಟ್ಟ ಮೂವರ ಶವಗಳನ್ನು ಪಿಪಿಇ ಕಿಟ್ ಧರಿಸಿದ ಸಿಬ್ಬಂದಿ ವ್ಯಾನ್ ನಿಂದ ಎಳೆದು ತಂದು ಒಂದೇ ಗುಂಡಿಗೆ ಎಸೆಯುವ 1 ನಿಮಿಷ 28 ಸೆಕೆಂಡಿನ ವೀಡಿಯೋ ಜಿಲ್ಲೆಗೆ ಸಂಬಂಧಿಸಿದ್ದು, ಈ ಘಟನೆಗಾಗಿ ಜಿಲ್ಲಾಡಳಿತವು ಮೃತರ ಸಂಬಂಧಿಕರಲ್ಲಿ ಹಾಗೂ ಜಿಲ್ಲೆಯ ಜನರಲ್ಲಿ ಬೇಷರತ್ ಆಗಿ ಕ್ಷಮೆ ಯಾಚಿಸುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಮಂಗಳವಾರ ಬೆಳಿಗ್ಗೆಯಿಂದಲೇ ಜಿಲ್ಲೆಯ ವಾಟ್ಸ್ಯಾಪ್ ಗುಂಪುಗಳಲ್ಲಿ ವೀಡಿಯೊ ಹರಿದಾಡಿದ ಬಳಿಕ ಅವರು ಹೆಚ್ಚುವರಿ ಜಿಲ್ಲಾಧಿಕಾರಿಗೆ ತನಿಖೆ ನಡೆಸುವಂತೆ ಸೂಚಿಸಿದ್ದರು.</p>.<p>'ತನಿಖೆಯಲ್ಲಿ, ವೀಡಿಯೋ ಬಳ್ಳಾರಿಯಲ್ಲಿ ನಡೆದಿದ್ದ ಅಂತ್ಯಸಂಸ್ಕಾರದ್ದೇ ಆಗಿರುವುದು ದೃಢಪಟ್ಟಿದೆ. ಶವಗಳನ್ನು ಸೋಂಕು ಹರಡದಂತೆ ಸಂಪೂರ್ಣ ಮುಚ್ಚಲಾಗಿತ್ತು. ಆದರೆ ಅವುಗಳನ್ನು ಗುಂಡಿಗೆ ಎಸೆದಿರುವುದು ವಿಷಾದನೀಯ ವರ್ತನೆಯಾಗಿದೆ.ಇದನ್ನು ಜಿಲ್ಲಾಡಳಿತ ಖಂಡಿಸುತ್ತದೆ' ಎಂದಿದ್ದಾರೆ.</p>.<p>'ಅಗೌರವಯುತವಾಗಿ ಅಂತಿಮ ಸಂಸ್ಕಾರ ನಡೆಸಿದ ತಂಡವನ್ನು ಬದಲಾಯಿಸಿದ್ದು, ವಿಮ್ಸ್ ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ಮುಖ್ಯಸ್ಥರ ನೇತೃತ್ವದಲ್ಲಿ ತರಬೇತಿ ಪಡೆದವರನ್ನು ನಿಯೋಜಿಸಲಾಗುವುದು' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>