ಬಳ್ಳಾರಿ: ಕೊರೊನ ಸೋಂಕಿನಿಂದ ಮೃತಪಟ್ಟ ಮೂವರ ಶವಗಳನ್ನು ಪಿಪಿಇ ಕಿಟ್ ಧರಿಸಿದ ಸಿಬ್ಬಂದಿ ವ್ಯಾನ್ ನಿಂದ ಎಳೆದು ತಂದು ಒಂದೇ ಗುಂಡಿಗೆ ಎಸೆಯುವ 1 ನಿಮಿಷ 28 ಸೆಕೆಂಡಿನ ವೀಡಿಯೋ ಜಿಲ್ಲೆಗೆ ಸಂಬಂಧಿಸಿದ್ದು, ಈ ಘಟನೆಗಾಗಿ ಜಿಲ್ಲಾಡಳಿತವು ಮೃತರ ಸಂಬಂಧಿಕರಲ್ಲಿ ಹಾಗೂ ಜಿಲ್ಲೆಯ ಜನರಲ್ಲಿ ಬೇಷರತ್ ಆಗಿ ಕ್ಷಮೆ ಯಾಚಿಸುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.