ಬಳ್ಳಾರಿ: ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರ್ ಅವರು ನಗರದ ವಿವಿಧೆಡೆ ಕಟ್ಟಡ ಕಾರ್ಮಿಕರು ತಂಗಿರುವ ಸ್ಥಳಕ್ಕೆ ಅಧಿಕಾರಿಗಳ ಜತೆಗೂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲಿಗೆ ಸರ್ಕಾರಿ ಅತಿಥಿಗೃಹದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾಡಳಿತದ ಸಂಕೀರ್ಣದಲ್ಲಿದ್ದ ಕಾರ್ಮಿಕರನ್ನು ಭೇಟಿಯಾಗಿ ಅಲ್ಲಿ ಒದಗಿಸಲಾಗಿರುವ ಸೌಲಭ್ಯಗಳನ್ನ ಪರಿಶೀಲಿಸಿದರು.
ನಂತರ ಮುಂಡರಗಿ ಬಳಿ ನಿರ್ಮಿಸಲಾಗುತ್ತಿರುವ ಆಶ್ರಯ ಬಡಾವಣೆಯಲ್ಲಿದ್ದ ಕಾರ್ಮಿಕರನ್ನು ಭೇಟಿಯಾಗಿ ಅವರ ಅಹವಾಲುಗಳನ್ನು ಆಲಿಸಿದರು.
ಕಾರ್ಮಿಕರಿಗೆ ಶೌಚಾಲಯ ಮತ್ತು ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಕೋವಿಡ್-19 ಹಿನ್ನೆಲೆ ಕಾರ್ಮಿಕರು ಚಿಂತಿತರಾಗುವುದು ಬೇಡ, ಅರಾಮವಾಗಿ ಇಲ್ಲಿಯೇ ಇರಿ ನಿಮಗೆ ಬೇಕಾದ ಅಗತ್ಯ ವಸತಿ ಮತ್ತು ಊಟ ಹಾಗೂ ಇನ್ನೀತರ ಸೌಕರ್ಯಗಳನ್ನು ಈಗಾಗಲೇ ಕಲ್ಪಿಸಲಾಗಿದೆ. ಎರಡ್ಮೂರು ದಿನಗಳಲ್ಲಿ ಮತ್ತೆ ಪರಿಶೀಲನೆಗೆ ಬರುವೆ ಎಂದರು.