ಬಳಿಕ ಅದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದರಿಂದ ಮಳೆ, ಗಾಳಿಯಿಂದ ಹಲವೆಡೆ ವಿದ್ಯುದ್ದೀಪಗಳು, ತಂತಿಗಳು ಸಂಪೂರ್ಣವಾಗಿ ಹಾಳಾಗಿದ್ದವು. ಈ ಕುರಿತು ವಿಶ್ವ ಪ್ರವಾಸೋದ್ಯಮ ದಿನದಂದು ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿ ಬೆಳಕು ಚೆಲ್ಲಿತ್ತು. ಅದರಿಂದ ಎಚ್ಚೆತ್ತುಕೊಂಡ ಪ್ರಾಧಿಕಾರ ದುರಸ್ತಿ ಕೆಲಸ ಕೈಗೆತ್ತಿಕೊಂಡಿತ್ತು. ಈಗ ಆ ಕೆಲಸ ಪೂರ್ಣಗೊಂಡಿದ್ದು, ಯೋಜನೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ.