ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟೂರು: ಎತ್ತಿನ‌ಗಾಡಿಗೆ ಬೈಕ್ ಡಿಕ್ಕಿಯಾಗಿ ದಂಪತಿ ಸಾವು

Last Updated 4 ಜನವರಿ 2021, 8:00 IST
ಅಕ್ಷರ ಗಾತ್ರ

ಕೊಟ್ಟೂರು: ತಾಲ್ಲೂಕಿನ ಬೆನಕನಹಳ್ಳಿ ಬಳಿ ಎತ್ತಿನ ಬಂಡಿಗೆ ಬೈಕ್ ಡಿಕ್ಕಿಯಾಗಿ ದಂಪತಿ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ 6ಗಂಟೆಗೆ ಸಂಭವಿಸಿದೆ.

ನಿವೇದಿತಾ(23), ಶಿವಕುಮಾರ್(34) ಮೃತಪಟ್ಟಿದ್ದಾರೆ, ಜಗಳೂರು ತಾಲ್ಲೂಕಿನ ಹೊಸಕೆರೆಯಿಂದ- ಸಂಡೂರಿಗೆ ಹೋಗುವ ಮಾರ್ಗ ಮಧ್ಯೆ ಅಪಘಾತವಾಗಿದೆ.

ನಿವೇದಿತಾರ ತವರು ಮನೆಯಾದ ಜಗಳೂರು ತಾಲ್ಲೂಕಿನ ಹೊಸಕೆರೆಯಿಂದ ಶಿವಕುಮಾರ್ ಅವರ ಸ್ವಗ್ರಾಮ ಸಂಡೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ದಂಪತಿ ಹೊರಟ್ಟಿದ್ದ ದ್ವಿಚಕ್ರ ವಾಹನವು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿಯ ಮುಂಬಾಗದ ಕಬ್ಬಿಣದ ಸಲಕೆ (ಮೋಕು) ಇಬ್ಬರಿಗೂ ಎದೆಗೆ ಹೊಕ್ಕಿದೆ. ತೀವ್ರವಾಗಿ ಗಾಯಗೊಂಡ ಪರಿಣಾಮ ಇಬ್ಬರುಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌.

ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT