ಸಂಡೂರು: ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ ಬಾಳಪ್ಪ(43) ಸೋಮವಾರ ಬೆಳಿಗ್ಗೆ ತಾಲ್ಲೂಕಿನ ತೋರಣಗಲ್ಲಿನ ಸಂಜೀವಿನಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರು ಶನಿವಾರ ಕೋವಿಶೀಲ್ಡ್ ಲಸಿಕೆ ಪಡೆದಿದ್ದರು. ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.
‘ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬಳ್ಳಾರಿಯ ವಿಮ್ಸ್ಗೆ ಕಳುಹಿಸಿಕೊಡಲಾಗಿದೆ. ವರದಿ ನಂತರವೇ ನಾಗರಾಜ ಅವರ ನಿಧನಕ್ಕೆ ನಿರ್ದಿಷ್ಟ ಕಾರಣ ತಿಳಿಯಲಿದೆ’ ಎಂದು ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ರಾಮಶೆಟ್ಟಿ ತಿಳಿಸಿದರು.
ಸಂಡೂರಿನ ವ್ಯಕ್ತಿ ಕೋವಿಡ್ ಲಸಿಕೆಯಿಂದ ಮೃತಪಟ್ಟಿಲ್ಲ: ಡಾ.ಕೆ. ಸುಧಾಕರ್
‘ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಮೃತರಾದರು ಎನ್ನುವುದು ವದಂತಿಯಷ್ಟೆ. ಅವರಿಗೆ ಮಧುಮೇಹ ನ್ಯೂನತೆ ಇತ್ತು. ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದರು.
‘ಕೋವಿಡ್ ಲಸಿಕೆ ಪಡೆದ ಬಳಿಕ ಅವರಿಗೆ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ. ಲಸಿಕೆಯ ಅಡ್ಡ ಪರಿಣಾಮದಿಂದ ಹೀಗಾಗಿದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ.
Two persons died after taking COVID-19 vaccine in UP & Karnataka. Death of the UP resident is not related to vaccination; post mortem is planned today for the second person: Union Health Ministry pic.twitter.com/HjDDsazEUs