ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿ, ಅಂಗನವಾಡಿ, ಆಶಾ ಕಾರ್ಯಕರ್ತೆ ಹಾಗೂ ಸ್ವಯಂ ಸೇವಕರನ್ನು ಒಳಗೊಂಡ ಪ್ರತಿ ತಂಡವು ನಗರದ ಎಲ್ಲಾ ವಾರ್ಡಿಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದೆ. ಕಳೆದ ಎರಡು ತಿಂಗಳಿಂದ ನಗರಕ್ಕೆ ವಲಸೆ ಬಂದವರ, ವರ್ಗಾವಣೆಗೊಂಡು ಇಲ್ಲಿಗೆ ಬಂದವರು ಹಾಗೂ ರೋಗಲಕ್ಷಣ ಹೊಂದಿದವರು, ಸೋಂಕಿನಿಂದ ಗುಣಮುಖರಾದವರ ಮಾಹಿತಿ ಕಲೆ ಹಾಕಲಾಗುತ್ತದೆ.