ಮಂಗಳವಾದ್ಯ ಕಲಾವಿದರು, ಬಾಣಸಿಗರು, ಅಕ್ಷರ ದಾಸೋಹ, ಹಾಸ್ಟೆಲ್ ಸಿಬ್ಬಂದಿ ಸೇರಿದಂತೆ ಹಲವು ವರ್ಗದ ಕಾರ್ಮಿಕರಿಗೆ ಯಾವುದೇ ನೆರವಿಲ್ಲ. ಮಸಣಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ವಿಮೆಯಾಗಲೀ, ಸುರಕ್ಷತಾ ಕ್ರಮಗಳಾಗಲೀ, ವಿಶೇಷ ನೆರವಾಗಲಿ ಇಲ್ಲ. ಕರ್ಫ್ಯೂ, ಲಾಕ್ ಡೌನ್, ಸಂಪೂರ್ಣ ಲಾಕ್ ಡೌನ್ ಕಾರಣದಿಂದ, ಆದಾಯವಿಲ್ಲದವರ ಸಾಲ ಹಾಗೂ ಸ್ತ್ರೀಶಕ್ತಿ, ಸ್ವ ಸಹಾಯ ಗುಂಪುಗಳ ಮಹಿಳೆಯರು ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡದೇ ಇರುವುದು ದುರದೃಷ್ಟಕರ ಎಂದಿದೆ.