‘ಜಿಲ್ಲೆಯ ಸುಶೀಲನಗರ, ಜಿ. ನಾಗಲಾಪುರ, ಗುಂಡಾ ಅರಣ್ಯ ಪ್ರದೇಶ ಸೇರಿದಂತೆ ಹಲವೆಡೆ ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಏಕಾಏಕಿ ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ. ರಾಮಘಡ, ದೋಣಿಮಲೈ, ಮಲಗೊಳ್ಳದಲ್ಲಿ ಜನವಿರೋಧದ ನಡುವೆ ಜಿಂದಾಲ್ಗೆ ಭೂಮಿ ನೀಡಲಾಗಿದೆ. ಯಾವ ಕಂಪೆನಿ ಗಣಿಗಾರಿಕೆಯಲ್ಲಿ ಅಕ್ರಮ ಎಸಗಿದೆಯೋ ಅದಕ್ಕೆ ಪುನಃ ಗಣಿಗಾರಿಕೆ ಮಾಡಲು ಅವಕಾಶ ಕಲ್ಪಿಸಿರುವುದು ದುರದೃಷ್ಟಕರ’ ಎಂದರು. ಈಗ ಸರ್ಕಾರವೇ ಬೆಲೆಬಾಳುವ ಜಮೀನನ್ನು ಕಡಿಮೆ ಬೆಲೆಗೆ ಕೊಡುತ್ತಿರುವುದು ದೊಡ್ಡ ಅನುಮಾನಕ್ಕೆ ಕಾರಣವಾಗಿದೆ. ಇದರಿಂದ ಹಿಂದೆ ಸರಿಯುವವರೆಗೆ ಜೂ. 6ರಿಂದ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮಾಹಿತಿ ನೀಡಿದರು.