ಬಳಿಕ ಮಾತನಾಡಿದ ಪಕ್ಷದ ಮುಖಂಡ ಭಾಸ್ಕರ್ ರೆಡ್ಡಿ, ‘370ನೇ ವಿಧಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾದ ತೀರ್ಮಾನ ಕೈಗೊಂಡಿದೆ. ಇದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಷ್ಟು ಅಸ್ಥಿರತೆ ಉಂಟಾಗಲಿದೆ. ಕಾರ್ಪೊರೇಟ್, ಬಂಡವಾಳಶಾಹಿಗಳಿಗೆ ಅಲ್ಲಿ ಉದ್ಯಮ ನಡೆಸಲು ಅನುಕೂಲ ಮಾಡಿಕೊಟ್ಟಿದೆ. ಇದರಿಂದ ಸ್ಥಳೀಯರಿಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದರು.