ಆದಾಯ ತೆರಿಗೆ ವ್ಯಾಪ್ತಿ ಹೊರಗಿನ ಎಲ್ಲ ಕುಟುಂಬಗಳಿಗೆ ಮಾಸಿಕ ₹7,500 ನೇರ ನಗದು ವರ್ಗಾವಣೆ, ಉಚಿತ ಆಹಾರ ಕಿಟ್ಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಮಾಡಿಲ್ಲ. ಉದ್ಯೋಗ ಖಾತ್ರಿ ಯೋಜನೆಗೆ ₹25,000 ಕೋಟಿ ಕಡಿತ ಮಾಡಲಾಗಿದೆ. ಆಹಾರ, ಇಂಧನ, ರಸಗೊಬ್ಬರ ಸಬ್ಸಿಡಿ ಕಡಿತಗೊಳಿಸಲಾಗಿದೆ. ಆರೋಗ್ಯ ಮತ್ತು ಗ್ರಾಮೀಣ ಅಭಿವೃದ್ಧಿ ಹಂಚಿಕೆಯೂ ಕಡಿಮೆಗೊಳಿಸಿರುವುದು ಜನವಿರೋಧಿ ನಿಲುವು ತೋರಿಸುತ್ತದೆ ಎಂದು ಟೀಕಿಸಿದರು.