<p><strong>ಹೊಸಪೇಟೆ(ವಿಜಯನಗರ): </strong>‘ಅಂಗನವಾಡಿ ಕಾರ್ಯಕರ್ತೆಯರು ಅರ್ಹ ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಮಹತ್ವ ಗೊತ್ತು ಪಡಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್ ತಿಳಿಸಿದರು.</p>.<p>ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.</p>.<p>‘ಸೆಪ್ಟೆಂಬರ್ ತಿಂಗಳನ್ನು ಪೌಷ್ಟಿಕ ತಿಂಗಳೆಂದು ಅಂಗನವಾಡಿಯಿಂದ ಆಚರಿಸಿ ಫಲಾನುಭವಿಗಳಿಗೆ ಪೌಷ್ಟಿಕತೆಯ ಮಾಹಿತಿ ನೀಡಲಾಗುತ್ತದೆ. ಆಹಾರ ವಿತರಿಸುವುದರ ಜೊತೆಗೆ ಪೌಷ್ಟಿಕತೆಯ ಮಹತ್ವವನ್ನು ಅವರಿಗೆ ಮನದಟ್ಟು ಮಾಡಬೇಕು’ ಎಂದು ಹೇಳಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ ಮಾತನಾಡಿ, ‘ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಕೈತೋಟ, ಕಿಶೋರಿ ಮತ್ತು ಬಾಣಂತಿಯರಿಗೆ ಯೋಗಾಭ್ಯಾಸ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳೆ ನಾಗಪ್ಪ, ಪೋಷಣ ಅಭಿಯಾನ ತಾಲ್ಲೂಕು ಸಂಯೋಜಕ ನೀಲಕಂಠ, ರಾಘವೇಂದ್ರ, ಎಲ್.ಡಿ.ನದಾಫ್, ಲಕ್ಷ್ಮೀದೇವಿ, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ): </strong>‘ಅಂಗನವಾಡಿ ಕಾರ್ಯಕರ್ತೆಯರು ಅರ್ಹ ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಮಹತ್ವ ಗೊತ್ತು ಪಡಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್ ತಿಳಿಸಿದರು.</p>.<p>ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.</p>.<p>‘ಸೆಪ್ಟೆಂಬರ್ ತಿಂಗಳನ್ನು ಪೌಷ್ಟಿಕ ತಿಂಗಳೆಂದು ಅಂಗನವಾಡಿಯಿಂದ ಆಚರಿಸಿ ಫಲಾನುಭವಿಗಳಿಗೆ ಪೌಷ್ಟಿಕತೆಯ ಮಾಹಿತಿ ನೀಡಲಾಗುತ್ತದೆ. ಆಹಾರ ವಿತರಿಸುವುದರ ಜೊತೆಗೆ ಪೌಷ್ಟಿಕತೆಯ ಮಹತ್ವವನ್ನು ಅವರಿಗೆ ಮನದಟ್ಟು ಮಾಡಬೇಕು’ ಎಂದು ಹೇಳಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ ಮಾತನಾಡಿ, ‘ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಕೈತೋಟ, ಕಿಶೋರಿ ಮತ್ತು ಬಾಣಂತಿಯರಿಗೆ ಯೋಗಾಭ್ಯಾಸ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳೆ ನಾಗಪ್ಪ, ಪೋಷಣ ಅಭಿಯಾನ ತಾಲ್ಲೂಕು ಸಂಯೋಜಕ ನೀಲಕಂಠ, ರಾಘವೇಂದ್ರ, ಎಲ್.ಡಿ.ನದಾಫ್, ಲಕ್ಷ್ಮೀದೇವಿ, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>