<p><strong>ಕಮಲಾಪುರ (ಹೊಸಪೇಟೆ/ವಿಜಯನಗರ): </strong>ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಂಜೆ ನಡೆದ 30ನೇ ‘ನುಡಿಹಬ್ಬ’ದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಾಲ್ವರಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಿದರು.</p>.<p>ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್. ಪುಟ್ಟಸ್ವಾಮಿ ಹಾಗೂ ಪರಿಸರ ಹೋರಾಟಗಾರ ಕಲ್ಕುಳಿ ವಿಠ್ಠಲ ಹೆಗಡೆ ಅವರಿಗೆ ಪದವಿ ಪ್ರದಾನ ಮಾಡಿ ಗೌರವಿಸಿದರು.</p>.<p>ಮುರುಘಾ ಶರಣರು ‘ವಚನ ಸಂಸ್ಕೃತಿಯ ಸಮುದಾಯ, ತತ್ವ ಮತ್ತು ಸಮಕಾಲೀನ ಸಂದರ್ಭ’, ಪದ್ಮರಾಜ ದಂಡಾವತಿ ಅವರು ‘ಮುದ್ರಣ ಮಾಧ್ಯಮ; ಸಮಕಾಲೀನ ವಿದ್ಯಮಾನಗಳು’, ಕಲ್ಕುಳಿ ವಿಠಲ್ ಹೆಗ್ಗಡೆ ಅವರು ‘ಮಳೆನಾಡು ಅಧ್ಯಯನ’ ಮತ್ತು ಬಿ.ಎಸ್. ಪುಟ್ಟಸ್ವಾಮಿ ಅವರು ‘ಹಳೇ ಮೈಸೂರಿನ ಒಕ್ಕಲಿಗರ ಸ್ಥಿತ್ಯಂತರಗಳು’ ಕುರಿತು ಪ್ರಬಂಧ ಮಂಡಿಸಿದ್ದಾರೆ.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 1387 ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಸೇರಿದಂತೆ ವಿವಿಧ ಪದವಿ ಪ್ರದಾನ ಮಾಡಿದರು. ಕುಲಪತಿ ಪ್ರೊ.ಸ.ಚಿ. ರಮೇಶ, ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, ವಿವಿಧ ನಿಕಾಯಗಳ ಡೀನ್, ಸಿಂಡಿಕೇಟ್ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಹೊಸಪೇಟೆ/ವಿಜಯನಗರ): </strong>ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಂಜೆ ನಡೆದ 30ನೇ ‘ನುಡಿಹಬ್ಬ’ದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಾಲ್ವರಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಿದರು.</p>.<p>ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್. ಪುಟ್ಟಸ್ವಾಮಿ ಹಾಗೂ ಪರಿಸರ ಹೋರಾಟಗಾರ ಕಲ್ಕುಳಿ ವಿಠ್ಠಲ ಹೆಗಡೆ ಅವರಿಗೆ ಪದವಿ ಪ್ರದಾನ ಮಾಡಿ ಗೌರವಿಸಿದರು.</p>.<p>ಮುರುಘಾ ಶರಣರು ‘ವಚನ ಸಂಸ್ಕೃತಿಯ ಸಮುದಾಯ, ತತ್ವ ಮತ್ತು ಸಮಕಾಲೀನ ಸಂದರ್ಭ’, ಪದ್ಮರಾಜ ದಂಡಾವತಿ ಅವರು ‘ಮುದ್ರಣ ಮಾಧ್ಯಮ; ಸಮಕಾಲೀನ ವಿದ್ಯಮಾನಗಳು’, ಕಲ್ಕುಳಿ ವಿಠಲ್ ಹೆಗ್ಗಡೆ ಅವರು ‘ಮಳೆನಾಡು ಅಧ್ಯಯನ’ ಮತ್ತು ಬಿ.ಎಸ್. ಪುಟ್ಟಸ್ವಾಮಿ ಅವರು ‘ಹಳೇ ಮೈಸೂರಿನ ಒಕ್ಕಲಿಗರ ಸ್ಥಿತ್ಯಂತರಗಳು’ ಕುರಿತು ಪ್ರಬಂಧ ಮಂಡಿಸಿದ್ದಾರೆ.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 1387 ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಸೇರಿದಂತೆ ವಿವಿಧ ಪದವಿ ಪ್ರದಾನ ಮಾಡಿದರು. ಕುಲಪತಿ ಪ್ರೊ.ಸ.ಚಿ. ರಮೇಶ, ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, ವಿವಿಧ ನಿಕಾಯಗಳ ಡೀನ್, ಸಿಂಡಿಕೇಟ್ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>