ಕಾಮಗಾರಿಗೆ ತಡೆ ಹಿಡಿಯಬೇಕೆಂದು ಒತ್ತಾಯಿಸಿ ಪರಿಸರ ಪ್ರೇಮಿಗಳು ಇತ್ತೀಚೆಗೆ ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ವಿರೋಧ ದಾಖಲಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಕಾಮಗಾರಿ ತಡೆ ಹಿಡಿಯುವ ಕೆಲಸ ಮಾಡಿಲ್ಲ. ಹೀಗಾಗಿ ಜೆ.ಸಿ.ಬಿ., ಹಿಟಾಚಿಗಳನ್ನು ಬಳಸಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ.