<p><strong>ಹೊಸಪೇಟೆ (ವಿಜಯನಗರ):</strong> ‘ದಾಸೋಹ ಪರಿಕಲ್ಪನೆ ಮೊದಲು ನೀಡಿದವರು ದೇವರ ದಾಸಿಮಯ್ಯನವರು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಲಲಿತ ಕಲಾ ನಿಕಾಯದ ಡೀನ್ ಕೆ. ರವೀಂದ್ರನಾಥ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇವರ ದಾಸಿಮಯ್ಯನವರು ಬಸವಣ್ಣನವರಿಗಿಂತ ಮುಂಚೆಯೇ ವರ್ಣಾಶ್ರಮದ ಬಗ್ಗೆ ಮಾತನಾಡಿದವರು. ಆ ಕಾಲದ ವೈರುಧ್ಯಗಳಿಗೆ ಸಾಕ್ಷಿಪ್ರಜ್ಞೆಯಾಗಿ ಬದುಕಿದವರು. ಇವರೊಬ್ಬ ಚಾರಿತ್ರಿಕ ವ್ಯಕ್ತಿ’ ಎಂದರು.</p>.<p>‘ಅವರ ಕಾಲದಲ್ಲಿ ಸಾಮಾಜಿಕ ವ್ಯವಸ್ಥೆ ಭಯಾನಕವಾಗಿತ್ತು. ಶರಣ ಚಳವಳಿ ಬಸವಪೂರ್ವದಲ್ಲೇ ಇತ್ತು. ಸಾಮಾಜಿಕ ಅನಿಷ್ಠಗಳನ್ನು ತಮ್ಮ ವಚನಗಳಲ್ಲಿ ವೈಚಾರಿಕ ಚಿಂತನೆಯ ಮೂಲಕ ಪ್ರಕಟಪಡಿಸಿದರು’ ಎಂದು ತಿಳಿಸಿದರು.</p>.<p>ಕುಲಪತಿ ಪ್ರೊ. ಸ.ಚಿ. ರಮೇಶ ಮಾತನಾಡಿ, ‘ದೇವರ ದಾಸಿಮಯ್ಯನವರ ವಚನಗಳು ಸಮಾಜದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಾಮರ್ಥ್ಯ ಹೊಂದಿವೆ. ದಾನ ನೀಡುವುದರ ಹಿಂದೆ ಯಾವುದೇ ಪ್ರತಿಫಲಾಪೇಕ್ಷೆ ಇರಬಾರದು ಎನ್ನುವುದನ್ನು ದಾಸಿಮಯ್ಯ ಆ ಕಾಲದಲ್ಲೇ ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ’ ಎಂದರು.</p>.<p>‘ದೇವರ ದಾಸಿಮಯ್ಯನವರ ವಚನಗಳು ಸಮಾಜದಲ್ಲಿನ ಮೌಢ್ಯ, ಆಚರಣೆ, ಹದಗೆಟ್ಟ ವ್ಯವಸ್ಥೆಯನ್ನು ಕಟುವಾಗಿ ಟೀಕಿಸುತ್ತವೆ. ಅವರ ವಚನಗಳು ಸಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿವೆ’ ಎಂದು ತಿಳಿಸಿದರು.</p>.<p>ಕುಲಸಚಿವ ಎ.ಸುಬ್ಬಣ್ಣ ರೈ, ದೇವರ ದಾಸಿಮಯ್ಯ ಅಧ್ಯಯನ ಪೀಠದ ಸಂಚಾಲಕ ಗೋವಿಂದ, ಸಂಶೋಧನಾ ವಿದ್ಯಾರ್ಥಿಗಳಾದ ಅಂಜಲಿ, ಸಕ್ಕುಬಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ದಾಸೋಹ ಪರಿಕಲ್ಪನೆ ಮೊದಲು ನೀಡಿದವರು ದೇವರ ದಾಸಿಮಯ್ಯನವರು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಲಲಿತ ಕಲಾ ನಿಕಾಯದ ಡೀನ್ ಕೆ. ರವೀಂದ್ರನಾಥ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇವರ ದಾಸಿಮಯ್ಯನವರು ಬಸವಣ್ಣನವರಿಗಿಂತ ಮುಂಚೆಯೇ ವರ್ಣಾಶ್ರಮದ ಬಗ್ಗೆ ಮಾತನಾಡಿದವರು. ಆ ಕಾಲದ ವೈರುಧ್ಯಗಳಿಗೆ ಸಾಕ್ಷಿಪ್ರಜ್ಞೆಯಾಗಿ ಬದುಕಿದವರು. ಇವರೊಬ್ಬ ಚಾರಿತ್ರಿಕ ವ್ಯಕ್ತಿ’ ಎಂದರು.</p>.<p>‘ಅವರ ಕಾಲದಲ್ಲಿ ಸಾಮಾಜಿಕ ವ್ಯವಸ್ಥೆ ಭಯಾನಕವಾಗಿತ್ತು. ಶರಣ ಚಳವಳಿ ಬಸವಪೂರ್ವದಲ್ಲೇ ಇತ್ತು. ಸಾಮಾಜಿಕ ಅನಿಷ್ಠಗಳನ್ನು ತಮ್ಮ ವಚನಗಳಲ್ಲಿ ವೈಚಾರಿಕ ಚಿಂತನೆಯ ಮೂಲಕ ಪ್ರಕಟಪಡಿಸಿದರು’ ಎಂದು ತಿಳಿಸಿದರು.</p>.<p>ಕುಲಪತಿ ಪ್ರೊ. ಸ.ಚಿ. ರಮೇಶ ಮಾತನಾಡಿ, ‘ದೇವರ ದಾಸಿಮಯ್ಯನವರ ವಚನಗಳು ಸಮಾಜದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಾಮರ್ಥ್ಯ ಹೊಂದಿವೆ. ದಾನ ನೀಡುವುದರ ಹಿಂದೆ ಯಾವುದೇ ಪ್ರತಿಫಲಾಪೇಕ್ಷೆ ಇರಬಾರದು ಎನ್ನುವುದನ್ನು ದಾಸಿಮಯ್ಯ ಆ ಕಾಲದಲ್ಲೇ ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ’ ಎಂದರು.</p>.<p>‘ದೇವರ ದಾಸಿಮಯ್ಯನವರ ವಚನಗಳು ಸಮಾಜದಲ್ಲಿನ ಮೌಢ್ಯ, ಆಚರಣೆ, ಹದಗೆಟ್ಟ ವ್ಯವಸ್ಥೆಯನ್ನು ಕಟುವಾಗಿ ಟೀಕಿಸುತ್ತವೆ. ಅವರ ವಚನಗಳು ಸಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿವೆ’ ಎಂದು ತಿಳಿಸಿದರು.</p>.<p>ಕುಲಸಚಿವ ಎ.ಸುಬ್ಬಣ್ಣ ರೈ, ದೇವರ ದಾಸಿಮಯ್ಯ ಅಧ್ಯಯನ ಪೀಠದ ಸಂಚಾಲಕ ಗೋವಿಂದ, ಸಂಶೋಧನಾ ವಿದ್ಯಾರ್ಥಿಗಳಾದ ಅಂಜಲಿ, ಸಕ್ಕುಬಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>