ಬಳಿಕ ಮಾತನಾಡಿದ ಅವರು, ‘ಹಂಪಿ ಉತ್ಸವದ ಯಶಸ್ಸಿನಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ದೊಡ್ಡದಿದೆ. ಉತ್ಸವದ ಸಂದರ್ಭದಲ್ಲಿ ಸಹಸ್ರಾರು ಜನ ಹಂಪಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ವಚ್ಛತೆಗೆ ಹಗಲಿರುಳು ಶ್ರಮಿಸಿದ್ದಾರೆ. ಅವರಿಂದಾಗಿ ಇಡೀ ಹಂಪಿ ಪರಿಸರದಲ್ಲಿ ಅಸ್ವಚ್ಛತೆ ಇರಲಿಲ್ಲ. ಜಿಲ್ಲಾ ಆಡಳಿತ ಅವರಿಗೆ ಕೃತಜ್ಞತೆ ಸಲ್ಲಿಸುತ್ತದೆ’ ಎಂದರು.