ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ನಾನು ಕೂಡ ನವದೆಹಲಿಗೆ ಹೋಗಿದ್ದೆ. ಇಬ್ಬರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಬಂದಿದ್ದೇವೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಚರ್ಚಿಸಿದ್ದೇವೆ. ಇತ್ತೀಚೆಗೆ ನಡೆದ ಉಪಚುನಾವಣೆ, ರಾಜ್ಯದ ಸ್ಥಿತಿಗತಿ, ಪಕ್ಷದ ಕುರಿತು ಚರ್ಚೆ ಮಾಡಿದ್ದೇವೆ. ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಅವರಿಗೆ ತಿಳಿಸಿದಾಗ, ‘ಇನ್ನೂ ಕೆಲವರ ಜತೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ’ ಎಂದು ಕಾರಜೋಳ ತಿಳಿಸಿದರು.