<p><strong>ಹೊಸಪೇಟೆ:</strong> ‘ಹಂಪಿ ಉತ್ಸವ’ದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯನಗರ ವೈಭವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ನಗರದಲ್ಲಿ ನಡೆಯುತ್ತಿರುವ ತಾಲೀಮನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ವೀಕ್ಷಿಸಿದರು.</p>.<p>ಬಳಿಕ ಮಾತನಾಡಿ, ‘ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಯೋಗದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮವು ಜನಮಾನಸದಲ್ಲಿ ಉಳಿಯುವಂತೆ ಎಲ್ಲಾ ಕಲಾವಿದರು ಪ್ರದರ್ಶನ ನೀಡಬೇಕು. ಇನ್ನೂ ಕಾಲಾವಕಾಶವಿದ್ದು, ಅಲ್ಲಿಯವರೆಗೆ ಉತ್ತಮ ರೀತಿಯಲ್ಲಿ ತರಬೇತಿ ಪಡೆಯಬೇಕು’ ಎಂದು ಹೇಳಿದರು.</p>.<p>‘ಜಿಲ್ಲಾಡಳಿತದ ಕೋರಿಕೆ ಮೇರೆಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಈ ಕಾರ್ಯಕ್ರಮ ನಡೆಸಲು ಒಪ್ಪಿಕೊಂಡಿರುವುದು ಸಂತೋಷದ ವಿಷಯ. ಅವರಿಗೆ ಅಗತ್ಯ ಸಹಕಾರ ನೀಡಲಾಗುವುದು’ ಎಂದರು.</p>.<p>ಶಾಸಕ ಆನಂದ್ ಸಿಂಗ್, ‘ಹಂಪಿ ಉತ್ಸವದಲ್ಲಿ ಅತಿ ಹೆಚ್ಚಿನ ಜನ ವೀಕ್ಷಿಸುವ ಕಾರ್ಯಕ್ರಮ ಇದಾಗಿದೆ. ಕಲಾವಿದರು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮ ನಡೆಸಿಕೊಡಬೇಕು’ ಎಂದು ತಿಳಿಸಿದರು.<br />ಸಚಿವಾಲಯದ ಅಧಿಕಾರಿಗಳಾದ ಎಚ್.ಕೃಷ್ಣಮೂರ್ತಿ, ಜಯಕುಮಾರ್, ಮನೋಹರ್, ಅವಿನಾಶ್ ಶ್ರೀವಾತ್ಸವ್, ನಿರ್ಮಲ್ ಕುಮಾರ್ ಇದ್ದರು.</p>.<p><strong>ಚಿತ್ರಕಲಾ ಶಿಬಿರಕ್ಕೆ ಚಾಲನೆ:</strong></p>.<p>ಉತ್ಸವದ ಪ್ರಯುಕ್ತ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಹಮ್ಮಿಕೊಂಡಿರುವ ಚಿತ್ರಕಲಾ ಶಿಬಿರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ನಿತೀಶ್ ಶನಿವಾರ ಚಾಲನೆ ನೀಡಿದರು.</p>.<p>’ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತಹ ನಿಟ್ಟಿನಲ್ಲಿ ಕಲಾವಿದರು ಕಲಾಕೃತಿಗಳನ್ನು ಮಾಡಬೇಕು’ ಎಂದು ತಿಳಿಸಿದರು.</p>.<p>ಸಂಸದ ವೈ.ದೇವೇಂದ್ರಪ್ಪ, ಕುಲಪತಿ ಪ್ರೊ.ಸ.ಚಿ. ರಮೇಶ, ಲಲತಕಲೆಗಳ ನಿಕಾಯದ ಡೀನ್ ಕೆ.ರವೀಂದ್ರನಾಥ, ಚಿತ್ರಕಲಾ ಶಿಬಿರದ ನಿರ್ದೇಶಕ ವೇಣುಗೋಪಾಲ, ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್ರಾವ್ ಬಿ.ಪಾಂಚಾಳ, ಪ್ರಾಧ್ಯಾಪಕ ಡಾ. ಕೃಷ್ಣೇಗೌಡ ಇದ್ದರು. ರಾಜ್ಯದ ವಿವಿಧ ಭಾಗದ ಕಲಾವಿದರು ಪಾಲ್ಗೊಂಡಿದ್ದರು.</p>.<p><strong>ಚಿತ್ರಕಲೆ, ಚಿತ್ರಸಂತೆ ಅರ್ಜಿ ಅವಧಿ ವಿಸ್ತರಣೆ:</strong></p>.<p>ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆ, ಚಿತ್ರಸಂತೆಗೆ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಜ. 7ರ ವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಜ. 5 ಕೊನೆ ದಿನವಾಗಿತ್ತು. ಒಬ್ಬರು ಎರಡು ಕಲಾಕೃತಿಗಳನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗಕ್ಕೆ ಜ. 7ರೊಳಗೆ ನೇರವಾಗಿ ತಂದು ಕೊಡಬಹುದು.ಹೆಚ್ಚಿನ ಮಾಹಿತಿಗೆ: 9900689982/9482850321 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಹಂಪಿ ಉತ್ಸವ’ದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯನಗರ ವೈಭವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ನಗರದಲ್ಲಿ ನಡೆಯುತ್ತಿರುವ ತಾಲೀಮನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ವೀಕ್ಷಿಸಿದರು.</p>.<p>ಬಳಿಕ ಮಾತನಾಡಿ, ‘ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಯೋಗದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮವು ಜನಮಾನಸದಲ್ಲಿ ಉಳಿಯುವಂತೆ ಎಲ್ಲಾ ಕಲಾವಿದರು ಪ್ರದರ್ಶನ ನೀಡಬೇಕು. ಇನ್ನೂ ಕಾಲಾವಕಾಶವಿದ್ದು, ಅಲ್ಲಿಯವರೆಗೆ ಉತ್ತಮ ರೀತಿಯಲ್ಲಿ ತರಬೇತಿ ಪಡೆಯಬೇಕು’ ಎಂದು ಹೇಳಿದರು.</p>.<p>‘ಜಿಲ್ಲಾಡಳಿತದ ಕೋರಿಕೆ ಮೇರೆಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಈ ಕಾರ್ಯಕ್ರಮ ನಡೆಸಲು ಒಪ್ಪಿಕೊಂಡಿರುವುದು ಸಂತೋಷದ ವಿಷಯ. ಅವರಿಗೆ ಅಗತ್ಯ ಸಹಕಾರ ನೀಡಲಾಗುವುದು’ ಎಂದರು.</p>.<p>ಶಾಸಕ ಆನಂದ್ ಸಿಂಗ್, ‘ಹಂಪಿ ಉತ್ಸವದಲ್ಲಿ ಅತಿ ಹೆಚ್ಚಿನ ಜನ ವೀಕ್ಷಿಸುವ ಕಾರ್ಯಕ್ರಮ ಇದಾಗಿದೆ. ಕಲಾವಿದರು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮ ನಡೆಸಿಕೊಡಬೇಕು’ ಎಂದು ತಿಳಿಸಿದರು.<br />ಸಚಿವಾಲಯದ ಅಧಿಕಾರಿಗಳಾದ ಎಚ್.ಕೃಷ್ಣಮೂರ್ತಿ, ಜಯಕುಮಾರ್, ಮನೋಹರ್, ಅವಿನಾಶ್ ಶ್ರೀವಾತ್ಸವ್, ನಿರ್ಮಲ್ ಕುಮಾರ್ ಇದ್ದರು.</p>.<p><strong>ಚಿತ್ರಕಲಾ ಶಿಬಿರಕ್ಕೆ ಚಾಲನೆ:</strong></p>.<p>ಉತ್ಸವದ ಪ್ರಯುಕ್ತ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಹಮ್ಮಿಕೊಂಡಿರುವ ಚಿತ್ರಕಲಾ ಶಿಬಿರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ನಿತೀಶ್ ಶನಿವಾರ ಚಾಲನೆ ನೀಡಿದರು.</p>.<p>’ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತಹ ನಿಟ್ಟಿನಲ್ಲಿ ಕಲಾವಿದರು ಕಲಾಕೃತಿಗಳನ್ನು ಮಾಡಬೇಕು’ ಎಂದು ತಿಳಿಸಿದರು.</p>.<p>ಸಂಸದ ವೈ.ದೇವೇಂದ್ರಪ್ಪ, ಕುಲಪತಿ ಪ್ರೊ.ಸ.ಚಿ. ರಮೇಶ, ಲಲತಕಲೆಗಳ ನಿಕಾಯದ ಡೀನ್ ಕೆ.ರವೀಂದ್ರನಾಥ, ಚಿತ್ರಕಲಾ ಶಿಬಿರದ ನಿರ್ದೇಶಕ ವೇಣುಗೋಪಾಲ, ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್ರಾವ್ ಬಿ.ಪಾಂಚಾಳ, ಪ್ರಾಧ್ಯಾಪಕ ಡಾ. ಕೃಷ್ಣೇಗೌಡ ಇದ್ದರು. ರಾಜ್ಯದ ವಿವಿಧ ಭಾಗದ ಕಲಾವಿದರು ಪಾಲ್ಗೊಂಡಿದ್ದರು.</p>.<p><strong>ಚಿತ್ರಕಲೆ, ಚಿತ್ರಸಂತೆ ಅರ್ಜಿ ಅವಧಿ ವಿಸ್ತರಣೆ:</strong></p>.<p>ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆ, ಚಿತ್ರಸಂತೆಗೆ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಜ. 7ರ ವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಜ. 5 ಕೊನೆ ದಿನವಾಗಿತ್ತು. ಒಬ್ಬರು ಎರಡು ಕಲಾಕೃತಿಗಳನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗಕ್ಕೆ ಜ. 7ರೊಳಗೆ ನೇರವಾಗಿ ತಂದು ಕೊಡಬಹುದು.ಹೆಚ್ಚಿನ ಮಾಹಿತಿಗೆ: 9900689982/9482850321 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>