<p><strong>ಕಮಲಾಪುರ (ಹೊಸಪೇಟೆ ತಾಲ್ಲೂಕು):</strong> ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಸರದಲ್ಲಿ ನಸುಕಿನ ಜಾವ ವಾಕ್ ಮಾಡಿದರು.</p>.<p>ನುಡಿಹಬ್ಬದಲ್ಲಿ ಪಾಲ್ಗೊಳ್ಳಲು ಅಶ್ವತ್ಥನಾರಾಯಣ ಅವರು ಸೋಮವಾರ ಸಂಜೆಯೇ ವಿಶ್ವವಿದ್ಯಾಲಯಕ್ಕೆ ಬಂದು ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದರು. ನಸುಕಿನ ಜಾವ ಐದು ಗಂಟೆಗೆ ವಿಶ್ವವಿದ್ಯಾಲಯದಲ್ಲಿ ವಾಕ್ ಮಾಡಿದರು. ವಾಕ್ ಮಾಡುತ್ತಲೇ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ವಿಶ್ವವಿದ್ಯಾಲಯದ ಹಚ್ಚ ಹಸಿರಿನ ಪರಿಸರ, ಪ್ರಶಾಂತ ವಾತಾವರಣ ನೋಡಿ ಆನಂದಿಸಿದರು. ಅವರಿಗೆ ಕುಲಪತಿ ಪ್ರೊ.ಸ.ಚಿ. ರಮೇಶ ಅವರು ಸಾಥ್ ನೀಡಿದರು.</p>.<p>ಬಳಿಕ ಅವರು ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ವಿರೂಪಾಕ್ಷನಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಪಂಪಾಂಬಿಕೆ ದೇವಿ, ಭುವನೇಶ್ವರಿ ದೇವಿ ದರ್ಶನ ಪಡೆದು, ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರನ್ನು ಕಂಡು ದರ್ಶನ ಪಡೆದರು. ಅನಂತರ ದೇವಸ್ಥಾನದ ಆನೆ ‘ಲಕ್ಷ್ಮಿ’ಯಿಂದ ಆಶೀರ್ವಾದ ಪಡೆದರು.</p>.<p>ಅಶ್ವತ್ಥನಾರಾಯಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸಾಥ್ ನೀಡಿದರು. ಸಂಕ್ಷಿಪ್ತವಾಗಿ ಹಂಪಿ, ವಿರೂಪಾಕ್ಷೇಶ್ವರ ದೇವಸ್ಥಾನದ ಕುರಿತು ವಿವರಿಸಿದರು. ಅನಂತರ ಆನಂದ್ ಸಿಂಗ್ ಅವರ ಮನೆಗೆ ತೆರಳಿ ಉಪಾಹಾರ ಸೇವಿಸಿದರು. ಅಲ್ಲಿಂದ ನೇರವಾಗಿ ವಿಶ್ವವಿದ್ಯಾಲಯಕ್ಕೆ ಬಂದು ಸಂಗೀತ ಮತ್ತು ನೃತ್ಯ ವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿದರು.</p>.<p>ತುರ್ತು ಕೆಲಸದ ನಿಮಿತ್ತ ಆನಂದ್ ಸಿಂಗ್ ಅವರು ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪಯಣ ಬೆಳೆಸಿದರು. ಅಶ್ವತ್ಥನಾರಾಯಣ ಅವರು ನುಡಿಹಬ್ಬದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಕೊನೆಯ ವರೆಗೆ ಇದ್ದರು. ಶಾಸಕ ಜಿ. ಸೋಮಶೇಖರ್ ರೆಡ್ಡಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್, ಹೆಚ್ಚುವರಿ ಎಸ್ಪಿ ಎನ್. ಲಾವಣ್ಯ, ಡಿವೈಎಸ್ಪಿ ಕಾಶಿಗೌಡ, ಇನ್ಸ್ಪೆಕ್ಟರ್ ವೈ. ಶಶಿಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಹೊಸಪೇಟೆ ತಾಲ್ಲೂಕು):</strong> ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಸರದಲ್ಲಿ ನಸುಕಿನ ಜಾವ ವಾಕ್ ಮಾಡಿದರು.</p>.<p>ನುಡಿಹಬ್ಬದಲ್ಲಿ ಪಾಲ್ಗೊಳ್ಳಲು ಅಶ್ವತ್ಥನಾರಾಯಣ ಅವರು ಸೋಮವಾರ ಸಂಜೆಯೇ ವಿಶ್ವವಿದ್ಯಾಲಯಕ್ಕೆ ಬಂದು ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದರು. ನಸುಕಿನ ಜಾವ ಐದು ಗಂಟೆಗೆ ವಿಶ್ವವಿದ್ಯಾಲಯದಲ್ಲಿ ವಾಕ್ ಮಾಡಿದರು. ವಾಕ್ ಮಾಡುತ್ತಲೇ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ವಿಶ್ವವಿದ್ಯಾಲಯದ ಹಚ್ಚ ಹಸಿರಿನ ಪರಿಸರ, ಪ್ರಶಾಂತ ವಾತಾವರಣ ನೋಡಿ ಆನಂದಿಸಿದರು. ಅವರಿಗೆ ಕುಲಪತಿ ಪ್ರೊ.ಸ.ಚಿ. ರಮೇಶ ಅವರು ಸಾಥ್ ನೀಡಿದರು.</p>.<p>ಬಳಿಕ ಅವರು ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ವಿರೂಪಾಕ್ಷನಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಪಂಪಾಂಬಿಕೆ ದೇವಿ, ಭುವನೇಶ್ವರಿ ದೇವಿ ದರ್ಶನ ಪಡೆದು, ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರನ್ನು ಕಂಡು ದರ್ಶನ ಪಡೆದರು. ಅನಂತರ ದೇವಸ್ಥಾನದ ಆನೆ ‘ಲಕ್ಷ್ಮಿ’ಯಿಂದ ಆಶೀರ್ವಾದ ಪಡೆದರು.</p>.<p>ಅಶ್ವತ್ಥನಾರಾಯಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸಾಥ್ ನೀಡಿದರು. ಸಂಕ್ಷಿಪ್ತವಾಗಿ ಹಂಪಿ, ವಿರೂಪಾಕ್ಷೇಶ್ವರ ದೇವಸ್ಥಾನದ ಕುರಿತು ವಿವರಿಸಿದರು. ಅನಂತರ ಆನಂದ್ ಸಿಂಗ್ ಅವರ ಮನೆಗೆ ತೆರಳಿ ಉಪಾಹಾರ ಸೇವಿಸಿದರು. ಅಲ್ಲಿಂದ ನೇರವಾಗಿ ವಿಶ್ವವಿದ್ಯಾಲಯಕ್ಕೆ ಬಂದು ಸಂಗೀತ ಮತ್ತು ನೃತ್ಯ ವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿದರು.</p>.<p>ತುರ್ತು ಕೆಲಸದ ನಿಮಿತ್ತ ಆನಂದ್ ಸಿಂಗ್ ಅವರು ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪಯಣ ಬೆಳೆಸಿದರು. ಅಶ್ವತ್ಥನಾರಾಯಣ ಅವರು ನುಡಿಹಬ್ಬದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಕೊನೆಯ ವರೆಗೆ ಇದ್ದರು. ಶಾಸಕ ಜಿ. ಸೋಮಶೇಖರ್ ರೆಡ್ಡಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್, ಹೆಚ್ಚುವರಿ ಎಸ್ಪಿ ಎನ್. ಲಾವಣ್ಯ, ಡಿವೈಎಸ್ಪಿ ಕಾಶಿಗೌಡ, ಇನ್ಸ್ಪೆಕ್ಟರ್ ವೈ. ಶಶಿಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>