ಕೊಡಗು ನೆರೆ ಸಂತ್ರಸ್ತರಿಗೆ ಹಂಪಿ ವಿ.ವಿ. ದೇಣಿಗೆ ಸಿ.ಎಂ.ಗೆ ಸಲ್ಲಿಕೆ

ಹೊಸಪೇಟೆ: ಕೊಡಗು ನೆರೆ ಸಂತ್ರಸ್ತರಿಗಾಗಿ ಸಾರ್ವಜನಿಕರು ಹಾಗೂ ಸಿಬ್ಬಂದಿಯಿಂದ ಸಂಗ್ರಹಿಸಿದ ದೇಣಿಗೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದರು.
ವಿ.ವಿ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಒಂದು ದಿನದ ವೇತನ ₨4,99,799 ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿದ ₨1,71,418 ಮೊತ್ತದ ಡಿ.ಡಿ.ಯನ್ನು ಸಿ.ಎಂ.ಗೆ ಸಲ್ಲಿಸಿದರು. ಸಾಹಿತಿ ಬಿ.ಟಿ. ಲಲಿತಾ ನಾಯಕ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜಶೇಖರ ಹತಗುಂದಿ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.