‘ಕೋಟೆ ಗೋಡೆಯಿಂದ ಸ್ವಲ್ಪವೇ ದೂರದಲ್ಲಿ ಕೊಳವೆಬಾವಿ ಕೊರೆಸಲಾಗಿದೆ. ಕಟ್ಟಡಗಳ ನಿರ್ಮಾಣಕ್ಕಾಗಿ ಭಾರಿ ವಾಹನಗಳಲ್ಲಿ ಸರಕು ತರಲಾಗಿದೆ. ಇದರ ಪರಿಣಾಮದಿಂದ ಕೋಟೆ ಗೋಡೆ ಕುಸಿದು ಬಿದ್ದಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಮುಖ್ಯ ಕಾರಣ. ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಕೋಟೆ ಗೋಡೆ ಪುನರ್ ನಿರ್ಮಿಸಬೇಕು’ ಎಂದು ಆಗ್ರಹಿಸಿದರು. ಸೇನೆಯ ಅಧ್ಯಕ್ಷ ವಿಶ್ವನಾಥ ಮಾಳಗಿ ಇತರರಿದ್ದರು.