ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹ

Last Updated 29 ಜನವರಿ 2019, 12:49 IST
ಅಕ್ಷರ ಗಾತ್ರ

ಹೊಸಪೇಟೆ: ‘ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಬೇಕು’ ಎಂದು ಮದ್ಯ ನಿಷೇಧ ಆಂದೋಲನ ಸಂಘಟನೆ ಆಗ್ರಹಿಸಿದೆ.

ಸಂಘಟನೆಯ ಸದಸ್ಯರು ಮಂಗಳವಾರ ಈ ಕುರಿತು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಸಂಘಟನೆಯ ಸದಸ್ಯರು ಮದ್ಯ ನಿಷೇಧಕ್ಕಾಗಿ ಚಿತ್ರದುರ್ಗದಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರಿಗೆ ತಲುಪಿದ್ದು, ಅಲ್ಲಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ಎಲ್ಲ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲೂ ಮನವಿ ಕೊಡಲಾಗಿದೆ. ಮದ್ಯ ಸೇವನೆಯಿಂದ ಅನೇಕ ಕುಟುಂಬಗಳು ಹಾಳಾಗುತ್ತಿವೆ. ಅದನ್ನು ತಡೆಯಬೇಕಾದರೆ ಸರ್ಕಾರ ಮದ್ಯದ ಮೇಲೆ ನಿಷೇಧ ಹೇರಬೇಕು’ ಎಂದು ಆಗ್ರಹಿಸಿದ್ದಾರೆ.

ಸಂಘಟನೆಯ ಸದಸ್ಯರಾದ ಎಚ್‌. ಲಕ್ಷ್ಮಿದೇವಿ, ವಿಜಯಲಕ್ಷ್ಮಿ, ಹುಲಿಗೆಮ್ಮ, ಸರಸ್ವತಿ, ಮಲ್ಲಿಕಾರ್ಜನ, ಸುನಿತಾ, ಚಾಂದಿನಿ, ಪ್ರತಾಪ್, ರವಿಕಿರಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT