ತುಂಗಭದ್ರಾ ಜಲಾಶಯ ನಿರ್ಮಾಣವಾದ ದಿನದಿಂದಲೂ ಸ್ಥಳೀಯರು ಯಾವುದೇ ಅಡೆತಡೆಗಳಿಲ್ಲದೆ ಮೀನುಗಾರಿಕೆ ಮಾಡುತ್ತಿದ್ದರು. ಆದರೆ, ಹತ್ತು ವರ್ಷಗಳಿಂದ ಟೆಂಡರ್ ಕರೆದು, ಹೊರಭಾಗದವರಿಗೆ ಮೀನುಗಾರಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಸ್ಥಳೀಯ ಮೀನುಗಾರರ ಬದುಕು ಅತಂತ್ರವಾಗಿದೆ. ಕೂಡಲೇ ಟೆಂಡರ್ ಕರೆಯುವುದನ್ನು ನಿಲ್ಲಿಸಿ, ಸ್ಥಳೀಯ ಮೀನುಗಾರರಿಗೆ ಮೀನುಗಾರಿಕೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.