ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ನ್ಯಾಯಾಧೀಶರ ವಜಾಕ್ಕೆ ಆಗ್ರಹ

Last Updated 1 ಫೆಬ್ರುವರಿ 2022, 6:22 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿರುವ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸರ್ಕಾರ ವಜಾಗೊಳಿಸಬೇಕೆಂದು ಜಾಗೃತ ನಾಯಕ ಬಳಗ ಹಾಗೂ ಏಕಲವ್ಯ ಯುವಕ ಸಂಘ ಆಗ್ರಹಿಸಿದೆ.

ಈ ಸಂಬಂಧ ಎರಡೂ ಸಂಘಟನೆಗಳ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಮಾಡಿದರು.

ರಾಯಚೂರಿನ ಕೋರ್ಟ್‌ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆಸಿರುವ ಮಲ್ಲಿಕಾರ್ಜುನಗೌಡ ಅವರ ನಡೆ ಖಂಡನಾರ್ಹವಾದುದು. ಸರ್ಕಾರ ತಕ್ಷಣವೇ ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಮುಖಂಡರಾದ ದುರುಗಪ್ಪ ಪೂಜಾರ, ಮರಡಿ ಜಂಬಯ್ಯ ನಾಯಕ, ಕಟಗಿ ಜಂಬಯ್ಯ ನಾಯಕ, ತಾಯಪ್ಪ ನಾಯಕ, ಕಣ್ಣಿ ಶ್ರೀಕಂಠ, ತಾರಿಹಳ್ಳಿ ಜಂಬುನಾಥ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT