‘ರಾಜ್ಯದ ಜನಸಂಖ್ಯೆಯಲ್ಲಿ ಶೇ 35ರಷ್ಟಿರುವ ಕುರುಬ, ಗಂಗಾಮತ, ಉಪ್ಪಾರ, ಯಾದವ, ಈಡಿಗ, ಬಲಿಜ, ನೇಕಾರ, ವಿಶ್ವಕರ್ಮ, ಮಡಿವಾಳ, ಸವಿತಾ ಹಾಗೂ ಗೌಳಿ ಮುಂತಾದ ಹಿಂದುಳಿದ ಜಾತಿಗಳಿಗೆ ಸಂವಿಧಾನಾತ್ಮಕವಾಗಿ ದೊರೆಯಬೇಕಾದ ಸೌಲಭ್ಯಗಳು ದೊರೆಯುತ್ತಿಲ್ಲ. ಹಿಂದುಳಿದ ಸಮುದಾಯದ ಶಾಸಕರು ಈ ಸಮುದಾಯಗಳ ಪರ ಸದನದಲ್ಲಿ ಧ್ವನಿ ಎತ್ತದಿರುವುದು ದುರದೃಷ್ಟಕರ’ ಎಂದು ಒಕ್ಕೂಟದ ಅಧ್ಯಕ್ಷ ವೈ.ಯಮುನೇಶ್ ತಿಳಿಸಿದರು.