<p><strong>ಬಳ್ಳಾರಿ: </strong>ಸಮರ್ಪಕಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಗರದ ಬಂಡಿಹಟ್ಟಿ ಪ್ರದೇಶದಲ್ಲಿ ಮಂಗಳವಾರ ನಗರ ಸಾರಿಗೆಯ ಬಂಡಿಹಟ್ಟಿ- ದುರ್ಗಮ್ಮ ಗುಡಿ ಮಾರ್ಗದ ಬಸ್ ತಡೆದು ಧರಣಿ ನಡೆಸಿದರು.</p>.<p>ಬೆಳಿಗ್ಗೆ ವೇಳೆ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಇಲ್ಲದಿರುವುದರಿಂದ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.</p>.<p>ಬೆಳಿಗ್ಗೆ 7.30 ಕ್ಕೆ, 8 ಗಂಟೆಗೆ ಬಸ್ ಸೌಕರ್ಯ ಇಲ್ಲದಿರುವುದರಿಂದ ಸಕಾಲಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯ ವಾಗುತ್ತಿಲ್ಲ. 9.30ರ ಬಳಿಕ ಬಸ್ ಬಂಡಿಹಟ್ಟಿಗೆ ಬರುವುದರಿಂದ ಪ್ರಯೋಜನವಾಗುವುದಿಲ್ಲ.<br />ಕೂಡಲೇ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.</p>.<p>ಬಂಡಿಹಟ್ಟಿಯಿಂದ ಗಡಿಗಿ ಚೆನ್ನಪ್ಪ ವೃತ್ತ, ಎಸ್ಪಿ ವೃತ್ತ, ದುರ್ಗಮ್ಮ ಗುಡಿ ವೃತ್ತದ ಕಡೆಗೆ ಬಸ್ ಸೌಕರ್ಯ ಬೇಕಾಗಿದೆ. ಆ ಪ್ರದೇಶಗಳಲ್ಲಿರುವ ಶಾಲೆ, ಕಾಲೇಜುಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಬಂಡಿಹಟ್ಟಿಯಿಂದ ತೆರಳುತ್ತಾರೆ ಎಂದು ಮುಖಂಡ ಕೆ.ಶಿವಶರಣ ಆಗ್ರಹಿಸಿದರು.</p>.<p>ನಗರ ಸಾರಿಗೆ ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬರುವವರೆಗೂ ಬಸ್ ಸಂಚಾರಕ್ಕೆ ಅನುವು ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಡಿಪೋ ಪ್ರತಿನಿಧಿಯೊಬ್ಬರು ಬಂದು ಮನವಿ ಪಡೆದು, ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ ಬಳಿಕ ಧರಣಿ ಕೊನೆಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಸಮರ್ಪಕಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಗರದ ಬಂಡಿಹಟ್ಟಿ ಪ್ರದೇಶದಲ್ಲಿ ಮಂಗಳವಾರ ನಗರ ಸಾರಿಗೆಯ ಬಂಡಿಹಟ್ಟಿ- ದುರ್ಗಮ್ಮ ಗುಡಿ ಮಾರ್ಗದ ಬಸ್ ತಡೆದು ಧರಣಿ ನಡೆಸಿದರು.</p>.<p>ಬೆಳಿಗ್ಗೆ ವೇಳೆ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಇಲ್ಲದಿರುವುದರಿಂದ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.</p>.<p>ಬೆಳಿಗ್ಗೆ 7.30 ಕ್ಕೆ, 8 ಗಂಟೆಗೆ ಬಸ್ ಸೌಕರ್ಯ ಇಲ್ಲದಿರುವುದರಿಂದ ಸಕಾಲಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯ ವಾಗುತ್ತಿಲ್ಲ. 9.30ರ ಬಳಿಕ ಬಸ್ ಬಂಡಿಹಟ್ಟಿಗೆ ಬರುವುದರಿಂದ ಪ್ರಯೋಜನವಾಗುವುದಿಲ್ಲ.<br />ಕೂಡಲೇ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.</p>.<p>ಬಂಡಿಹಟ್ಟಿಯಿಂದ ಗಡಿಗಿ ಚೆನ್ನಪ್ಪ ವೃತ್ತ, ಎಸ್ಪಿ ವೃತ್ತ, ದುರ್ಗಮ್ಮ ಗುಡಿ ವೃತ್ತದ ಕಡೆಗೆ ಬಸ್ ಸೌಕರ್ಯ ಬೇಕಾಗಿದೆ. ಆ ಪ್ರದೇಶಗಳಲ್ಲಿರುವ ಶಾಲೆ, ಕಾಲೇಜುಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಬಂಡಿಹಟ್ಟಿಯಿಂದ ತೆರಳುತ್ತಾರೆ ಎಂದು ಮುಖಂಡ ಕೆ.ಶಿವಶರಣ ಆಗ್ರಹಿಸಿದರು.</p>.<p>ನಗರ ಸಾರಿಗೆ ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬರುವವರೆಗೂ ಬಸ್ ಸಂಚಾರಕ್ಕೆ ಅನುವು ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಡಿಪೋ ಪ್ರತಿನಿಧಿಯೊಬ್ಬರು ಬಂದು ಮನವಿ ಪಡೆದು, ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ ಬಳಿಕ ಧರಣಿ ಕೊನೆಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>