‘ಹಂಪಿ, ಆನೆಗೊಂದಿ, ಕಂಪ್ಲಿ, ಕೊಪ್ಪಳ, ಗಂಗಾವತಿ ಪ್ರಾಗೈತಿಹಾಸಿಕ ಹಾಗೂ ಚಾರಿತ್ರಿಕ ನೆಲೆಗಳು. ಆರಂಭದಿಂದಲೂ ಬುದ್ಧನ ಹಾಗೂ ಬೌದ್ಧ ಧರ್ಮದ ತತ್ವಸಿದ್ದಾಂತಗಳನ್ನು ಅಳವಡಿಸಿಕೊಂಡ ಪ್ರದೇಶಗಳೇ ಆಗಿವೆ. ಕೊಪ್ಪಳ, ಮಸ್ಕಿ, ಸಂಗನಕಲ್ಲು, ಜಟ್ಟಿಗರಾಮೇಶ್ವರ, ಸನ್ನತ್ತಿಗಳಂತಹ ಐತಿಹಾಸಿಕ ಸ್ಥಳಗಳಲ್ಲಿ ದೇವನಾಂಪ್ರಿಯ ಪ್ರಿಯದರ್ಶಿನಿ ಅಶೋಕ ಮಹಾರಾಜನ ಬೌದ್ಧ ಧರ್ಮದ ತತ್ವ ಸಿದ್ದಾಂತಗಳನ್ನು ವ್ಯಕ್ತಪಡಿಸುವ ಶಾಸನಗಳು ನಿರ್ಮಾಣಗೊಂಡಿರುವುದು ಐತಿಹಾಸಿಕ ಸತ್ಯ. ಹಂಪಿಯಲ್ಲಿ ಬೌದ್ಧ ಧರ್ಮದ ಮಹತ್ವದ ಕುರುಹುಗಳು ದೊರಕಿರುವುದು ಚಾರಿತ್ರಿಕವಾಗಿ ಸತ್ಯವಾಗಿದೆ. ಹಾಗಾಗಿ ಬುದ್ಧನ ಪುತ್ಥಳಿ ಪ್ರತಿಷ್ಠಾಪಿಸುವುದು ಸೂಕ್ತ’ ಎಂದು ವಿವರಿಸಿದರು.