ಆನ್ಲೈನ್ನಲ್ಲಿ ಬಸ್ ಪಾಸ್ಗೆ ಅರ್ಜಿ ಸಲ್ಲಿಸಬೇಕಾದರೆ ಮೊಬೈಲ್, ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು. ಸೇವಾ ಸಿಂಧೂ ಕೇಂದ್ರದಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವುದರಿಂದ ₹100 ಕೊಟ್ಟು ಭರಿಸಬೇಕಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಬಹಳ ಕಷ್ಟವಾಗುತ್ತಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.