ನಂತರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ‘ಬುಡ್ಗ ಜಂಗಮ ಸಮುದಾಯದವರು ಪಡಿತರ ಚೀಟಿ ಇಲ್ಲದೆ, ವಾಸಿಸಲು ಯೋಗ್ಯ ಮನೆ ಇಲ್ಲದೆ ಗುಡಿಸಲು ಕಟ್ಟಿಕೊಂಡು ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅಲೆಮಾರಿ ಸಮುದಾಯದ ಕುಟುಂಬಕ್ಕೆ ₹10 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಒತ್ತಾಯಿಸಿದರು.