ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ರೈಲು ಓಡಿಸಬೇಕೆಂಬ ಬೇಡಿಕೆಗೆ ಈ ಭಾಗದ ಎಲ್ಲಾ ಮಠಾಧೀಶರು, ಸಂಘ ಸಂಸ್ಥೆಗಳು, ಪಕ್ಷಾತೀತವಾಗಿ ಜನಪ್ರತಿನಿಧಿಗಳು ಸ್ಪಂದಿಸಿದ್ದಾರೆ. ಈ ಹಿಂದೆ ಸಂಸದರಾಗಿದ್ದಾಗ ಶ್ರೀರಾಮುಲು, ಶಾಂತಾ ಅವರು ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಿದ್ದಾರೆ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು ತಪ್ಪು. ಕೂಡಲೇ ಆಗಿರುವ ತಪ್ಪು ಸರಿಪಡಿಸಿ, ಆಹ್ವಾನ ಪತ್ರಿಕೆಯಲ್ಲಿ ಇವರಿಬ್ಬರ ಹೆಸರು ಸೇರಿಸಲು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಕ್ರಮ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿದ್ದಾರೆ.