‘ವಿದ್ಯಾರ್ಥಿ ವೇತನದಿಂದ ಶಾಲಾ,ಕಾಲೇಜಿನ ಶುಲ್ಕ ಭರಿಸಿ, ಅಗತ್ಯ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳು ಖರೀದಿಸುತ್ತಾರೆ. ಅದರಲ್ಲೂ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನೇ ಅವಲಂಬಿಸಿ ವ್ಯಾಸಂಗ ಮಾಡುತ್ತಾರೆ. ಆದರೆ, ಎರಡು ವರ್ಷಗಳಿಂದ ವಿದ್ಯಾರ್ಥಿ ವೇತನ ಪಾವತಿಯಾಗದ ಕಾರಣ ಅವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅವರ ಓದಿಗೆ ಹಿನ್ನಡೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಆದಷ್ಟು ಶೀಘ್ರ ಪಾವತಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.