<p><strong>ಹೊಸಪೇಟೆ</strong>: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ ಕೊಲೆ ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಸಂಘದ ತಾಲ್ಲೂಕು ಘಟಕ ಆಗ್ರಹಿಸಿದೆ.</p>.<p>ಈ ಸಂಬಂಧ ಸಂಘದ ಪದಾಧಿಕಾರಿಗಳು ಸೋಮವಾರ ಉಪ ತಹಶೀಲ್ದಾರ್ ಅಮರನಾಥ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>‘ಬಂಗ್ಲೆ ಅವರು ಇತ್ತೀಚೆಗೆ ಅವರ ಪತ್ರಿಕೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮದ ಕುರಿತು ವರದಿ ಮಾಡಿದ್ದರು. ಹೀಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಬೆದರಿಕೆ ಹಾಕಿರುವವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಸಂಘದ ಜಿಲ್ಲಾ ಉಪಾಧ್ಯಕ್ಷ ಗಾಳೆಪ್ಪ, ತಾಲ್ಲೂಕು ಗೌರವ ಅಧ್ಯಕ್ಷ ಟೈಗರ್ ಪಂಪಣ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಕುಬಾಳು, ಉಪಾಧ್ಯಕ್ಷ ಭೀಮಾ ನಾಯ್ಕ, ಸದಸ್ಯರಾದ ಶರಣಪ್ಪ, ರಾಮಜೀ ನಾಯ್ಕ, ಕೆ.ಬಿ. ಖವಾಸ್ ಮನವಿಗೆ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ ಕೊಲೆ ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಸಂಘದ ತಾಲ್ಲೂಕು ಘಟಕ ಆಗ್ರಹಿಸಿದೆ.</p>.<p>ಈ ಸಂಬಂಧ ಸಂಘದ ಪದಾಧಿಕಾರಿಗಳು ಸೋಮವಾರ ಉಪ ತಹಶೀಲ್ದಾರ್ ಅಮರನಾಥ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>‘ಬಂಗ್ಲೆ ಅವರು ಇತ್ತೀಚೆಗೆ ಅವರ ಪತ್ರಿಕೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮದ ಕುರಿತು ವರದಿ ಮಾಡಿದ್ದರು. ಹೀಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಬೆದರಿಕೆ ಹಾಕಿರುವವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಸಂಘದ ಜಿಲ್ಲಾ ಉಪಾಧ್ಯಕ್ಷ ಗಾಳೆಪ್ಪ, ತಾಲ್ಲೂಕು ಗೌರವ ಅಧ್ಯಕ್ಷ ಟೈಗರ್ ಪಂಪಣ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಕುಬಾಳು, ಉಪಾಧ್ಯಕ್ಷ ಭೀಮಾ ನಾಯ್ಕ, ಸದಸ್ಯರಾದ ಶರಣಪ್ಪ, ರಾಮಜೀ ನಾಯ್ಕ, ಕೆ.ಬಿ. ಖವಾಸ್ ಮನವಿಗೆ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>