ಹೊಸಪೇಟೆ: ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮದ ಪುರಾತನ ಕೆರೆಗೆ ನೀರು ಹರಿಸುವಂತೆ ಕೆರೆ ಹೋರಾಟ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಂದಾಲ್ನ ರಾಜಶೇಖರ್ ಪಟ್ಟಣಶೆಟ್ಟಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.
‘ಕೆರೆಯಲ್ಲಿ ನೀರಿಲ್ಲದ ಕಾರಣ ಜನ, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಯ ಪಕ್ಕದಿಂದ ಜಿಂದಾಲ್ಗೆ ಸೇರಿದ ಕುಡಿಯುವ ನೀರಿನ ಪೈಪ್ಲೈನ್ ಹಾದು ಹೋಗಿದೆ. ಅದರಿಂದ ಕೆರೆಗೆ ನೀರು ಹರಿಸಿದರೆ ಜನ, ಜಾನುವಾರುಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ’ ಎಂದು ತಿಳಿಸಿದ್ದಾರೆ.