<p><strong>ಹೊಸಪೇಟೆ: </strong>ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮದ ಪುರಾತನ ಕೆರೆಗೆ ನೀರು ಹರಿಸುವಂತೆ ಕೆರೆ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಂದಾಲ್ನ ರಾಜಶೇಖರ್ ಪಟ್ಟಣಶೆಟ್ಟಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.</p>.<p>‘ಕೆರೆಯಲ್ಲಿ ನೀರಿಲ್ಲದ ಕಾರಣ ಜನ, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಯ ಪಕ್ಕದಿಂದ ಜಿಂದಾಲ್ಗೆ ಸೇರಿದ ಕುಡಿಯುವ ನೀರಿನ ಪೈಪ್ಲೈನ್ ಹಾದು ಹೋಗಿದೆ. ಅದರಿಂದ ಕೆರೆಗೆ ನೀರು ಹರಿಸಿದರೆ ಜನ, ಜಾನುವಾರುಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಜಿಂದಾಲ್ನ ಉಪಾಧ್ಯಕ್ಷ ಮಂಜುನಾಥ ಪ್ರಭು, ಸಮಿತಿ ಮುಖಂಡರಾದ ಕಿಚಿಡಿ ಕೊಟ್ರೇಶ್, ಬಿ.ಫಣೀಂದ್ರ ಗೌಡ, ಅನುವಾಳ ವಿಶ್ವನಾಥ ರೆಡ್ಡಿ, ಎ.ಗಂಗಾಧರಪ್ಪ, ಕಪ್ಪಗಲ್ ಸಿದ್ದಲಿಂಗಮೂರ್ತಿ, ಎತ್ತಿನಹಟ್ಟಿ ಯಂಕಪ್ಪ, ಕುಂಬಾರ ಸುಡುಗಾಡೆಪ್ಪ, ಓ.ಭೀಮರೆಡ್ಡಿ, ಬಳ್ಳಾರಿ ಲಕ್ಷ್ಮಿಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮದ ಪುರಾತನ ಕೆರೆಗೆ ನೀರು ಹರಿಸುವಂತೆ ಕೆರೆ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಂದಾಲ್ನ ರಾಜಶೇಖರ್ ಪಟ್ಟಣಶೆಟ್ಟಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.</p>.<p>‘ಕೆರೆಯಲ್ಲಿ ನೀರಿಲ್ಲದ ಕಾರಣ ಜನ, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಯ ಪಕ್ಕದಿಂದ ಜಿಂದಾಲ್ಗೆ ಸೇರಿದ ಕುಡಿಯುವ ನೀರಿನ ಪೈಪ್ಲೈನ್ ಹಾದು ಹೋಗಿದೆ. ಅದರಿಂದ ಕೆರೆಗೆ ನೀರು ಹರಿಸಿದರೆ ಜನ, ಜಾನುವಾರುಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ’ ಎಂದು ತಿಳಿಸಿದ್ದಾರೆ.</p>.<p>ಜಿಂದಾಲ್ನ ಉಪಾಧ್ಯಕ್ಷ ಮಂಜುನಾಥ ಪ್ರಭು, ಸಮಿತಿ ಮುಖಂಡರಾದ ಕಿಚಿಡಿ ಕೊಟ್ರೇಶ್, ಬಿ.ಫಣೀಂದ್ರ ಗೌಡ, ಅನುವಾಳ ವಿಶ್ವನಾಥ ರೆಡ್ಡಿ, ಎ.ಗಂಗಾಧರಪ್ಪ, ಕಪ್ಪಗಲ್ ಸಿದ್ದಲಿಂಗಮೂರ್ತಿ, ಎತ್ತಿನಹಟ್ಟಿ ಯಂಕಪ್ಪ, ಕುಂಬಾರ ಸುಡುಗಾಡೆಪ್ಪ, ಓ.ಭೀಮರೆಡ್ಡಿ, ಬಳ್ಳಾರಿ ಲಕ್ಷ್ಮಿಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>