ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ನೀರು ಹರಿಸಲು ಹಕ್ಕೊತ್ತಾಯ

Last Updated 2 ಜನವರಿ 2020, 13:15 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮದ ಪುರಾತನ ಕೆರೆಗೆ ನೀರು ಹರಿಸುವಂತೆ ಕೆರೆ ಹೋರಾಟ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಂದಾಲ್‌ನ ರಾಜಶೇಖರ್‌ ಪಟ್ಟಣಶೆಟ್ಟಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

‘ಕೆರೆಯಲ್ಲಿ ನೀರಿಲ್ಲದ ಕಾರಣ ಜನ, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಯ ಪಕ್ಕದಿಂದ ಜಿಂದಾಲ್‌ಗೆ ಸೇರಿದ ಕುಡಿಯುವ ನೀರಿನ ಪೈಪ್‌ಲೈನ್‌ ಹಾದು ಹೋಗಿದೆ. ಅದರಿಂದ ಕೆರೆಗೆ ನೀರು ಹರಿಸಿದರೆ ಜನ, ಜಾನುವಾರುಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ’ ಎಂದು ತಿಳಿಸಿದ್ದಾರೆ.

ಜಿಂದಾಲ್‌ನ ಉಪಾಧ್ಯಕ್ಷ ಮಂಜುನಾಥ ಪ್ರಭು, ಸಮಿತಿ ಮುಖಂಡರಾದ ಕಿಚಿಡಿ ಕೊಟ್ರೇಶ್, ಬಿ.ಫಣೀಂದ್ರ ಗೌಡ, ಅನುವಾಳ ವಿಶ್ವನಾಥ ರೆಡ್ಡಿ, ಎ.ಗಂಗಾಧರಪ್ಪ, ಕಪ್ಪಗಲ್ ಸಿದ್ದಲಿಂಗಮೂರ್ತಿ, ಎತ್ತಿನಹಟ್ಟಿ ಯಂಕಪ್ಪ, ಕುಂಬಾರ ಸುಡುಗಾಡೆಪ್ಪ, ಓ.ಭೀಮರೆಡ್ಡಿ, ಬಳ್ಳಾರಿ ಲಕ್ಷ್ಮಿಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT