<p><strong>ಹೊಸಪೇಟೆ: </strong>ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಿ, ಕೊಳೆಗೇರಿ ವಾಸಿಗಳಿಗೆ ಹತ್ತು ಸಾವಿರ ಮನೆ ನಿರ್ಮಿಸಿಕೊಡಬೇಕು ಎಂದು ‘ಹೊಸಪೇಟೆ ಸ್ಲಂ ಜನಜಾಗೃತಿ ಆಂದೋಲನ ಸಮಿತಿ’ ಒತ್ತಾಯಿಸಿದೆ.</p>.<p>ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಬುಧವಾರ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಿದರು.</p>.<p>ಈಗಾಗಲೇ ಸರ್ಕಾರವು ವಿಜಯನಗರ ಜಿಲ್ಲೆ ಘೋಷಿಸಿದೆ. ಅಂತಿಮ ಅಧಿಸೂಚನೆ ಹೊರಡಿಸುವುದಕ್ಕೂ ಮುನ್ನ ಆಕ್ಷೇಪಣೆ ಸ್ವೀಕರಿಸುತ್ತಿದೆ. ಈ ಭಾಗದ ಜನರ ಬಹುವರ್ಷಗಳ ಒತ್ತಾಸೆಯಂತೆ ಜಿಲ್ಲೆ ಘೋಷಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎನ್ನುವುದು ನಮ್ಮ ಸಂಘಟನೆಯ ಆಗ್ರಹವೂ ಆಗಿದೆ ಎಂದು ತಿಳಿಸಿದರು.</p>.<p>ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಮೀಸಲಿಡಬೇಕು. ಖನಿಜ ನಿಧಿಯಿಂದ ₹1,000 ಕೋಟಿ ತೆಗೆದಿಡಬೇಕು. ಸ್ಲಂ ನಿವಾಸಿಗಳ ಸಮಗ್ರ ಕಲ್ಯಾಣಕ್ಕೆ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ಮುಖಂಡರಾದ ರಾಮಚಂದ್ರ, ಹುಲಿಗೆಮ್ಮ, ನಾಜರಾ, ಫಾತೀಮಾ, ಖೈರುನ್ನೀಸಾ, ರಜೀಯಾ ಬೇಗಂ, ಶ್ರೀನಿವಾಸ, ಹುಸೇನ್ಬೀ, ರೆಹಮಾನ್, ವೆಂಕಟಮ್ಮ, ಶಿವಪ್ಪ, ರೇಖಾ, ವಿಠ್ಠಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಿ, ಕೊಳೆಗೇರಿ ವಾಸಿಗಳಿಗೆ ಹತ್ತು ಸಾವಿರ ಮನೆ ನಿರ್ಮಿಸಿಕೊಡಬೇಕು ಎಂದು ‘ಹೊಸಪೇಟೆ ಸ್ಲಂ ಜನಜಾಗೃತಿ ಆಂದೋಲನ ಸಮಿತಿ’ ಒತ್ತಾಯಿಸಿದೆ.</p>.<p>ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಬುಧವಾರ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಿದರು.</p>.<p>ಈಗಾಗಲೇ ಸರ್ಕಾರವು ವಿಜಯನಗರ ಜಿಲ್ಲೆ ಘೋಷಿಸಿದೆ. ಅಂತಿಮ ಅಧಿಸೂಚನೆ ಹೊರಡಿಸುವುದಕ್ಕೂ ಮುನ್ನ ಆಕ್ಷೇಪಣೆ ಸ್ವೀಕರಿಸುತ್ತಿದೆ. ಈ ಭಾಗದ ಜನರ ಬಹುವರ್ಷಗಳ ಒತ್ತಾಸೆಯಂತೆ ಜಿಲ್ಲೆ ಘೋಷಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎನ್ನುವುದು ನಮ್ಮ ಸಂಘಟನೆಯ ಆಗ್ರಹವೂ ಆಗಿದೆ ಎಂದು ತಿಳಿಸಿದರು.</p>.<p>ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಮೀಸಲಿಡಬೇಕು. ಖನಿಜ ನಿಧಿಯಿಂದ ₹1,000 ಕೋಟಿ ತೆಗೆದಿಡಬೇಕು. ಸ್ಲಂ ನಿವಾಸಿಗಳ ಸಮಗ್ರ ಕಲ್ಯಾಣಕ್ಕೆ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ಮುಖಂಡರಾದ ರಾಮಚಂದ್ರ, ಹುಲಿಗೆಮ್ಮ, ನಾಜರಾ, ಫಾತೀಮಾ, ಖೈರುನ್ನೀಸಾ, ರಜೀಯಾ ಬೇಗಂ, ಶ್ರೀನಿವಾಸ, ಹುಸೇನ್ಬೀ, ರೆಹಮಾನ್, ವೆಂಕಟಮ್ಮ, ಶಿವಪ್ಪ, ರೇಖಾ, ವಿಠ್ಠಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>