ಖಾಸಗಿ ಸುದ್ದಿವಾಹಿನಿಯು ಸಿ.ಎಂ. ಜತೆ ಏರ್ಪಡಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಶಾರದಾ, ‘ದೆಹಲಿಯ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಉತ್ತಮ ಸೌಕರ್ಯ ಕಲ್ಪಿಸಲಾಗಿದೆ. ಅದೇ ರೀತಿ ನಮ್ಮ ರಾಜ್ಯದ ಎಲ್ಲ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು. ಎಲ್ಲ ಶಾಲೆಗಳಲ್ಲಿ ಎಫ್ಡಿಎ, ಎಸ್ಡಿಎ ಹುದ್ದೆಗಳನ್ನು ತುಂಬಬೇಕು. ಹೀಗೆ ಮಾಡಿದರೆ ಶಿಕ್ಷಕರ ಮೇಲಿನ ಹೆಚ್ಚಿನ ಭಾರ ಕಡಿಮೆಯಾಗುತ್ತದೆ. ಅವರು ಪೂರ್ಣ ಪ್ರಮಾಣದಲ್ಲಿ ಪಾಠದ ಕಡೆಗೆ ಲಕ್ಷ್ಯ ಕೊಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದಳು.