<p><strong>ಉಚ್ಚಂಗಿದುರ್ಗ (ಬಳ್ಳಾರಿ ಜಿ.):</strong> ಸಮೀಪದ ಅರಸೀಕೆರೆ ಗ್ರಾಮದೇವತೆ ದಂಡಿನ ದುರ್ಗಮ್ಮ ದೇವಿ ಕಾರ್ತಿಕೋತ್ಸವದಲ್ಲಿ ಶನಿವಾರ ರಾತ್ರಿ 2.30ಕ್ಕೆ ನಡೆದ ಹೊಳೆ ಪೂಜೆಯಲ್ಲಿ ದಲಿತ ಪೂಜಾರಿಗಳ ಪಾದಸ್ಪರ್ಶಕ್ಕಾಗಿ ಭಕ್ತರು ಮುಗಿಬಿದ್ದರು.</p>.<p>ಕೋವಿಡ್ ಕಾರಣದಿಂದ ಜನ ಸೇರುವುದನ್ನು ತಡೆಯಲು ದೇವಿ ಉತ್ಸವಮೂರ್ತಿಯನ್ನು ತಡರಾತ್ರಿ 2.30ಕ್ಕೆ ತಿಮಲಾಪುರದ ಬಳಿ ಮಂಗಳವಾದ್ಯ ಗಳೊಂದಿಗೆ ಗಂಗಾ ಪೂಜೆಗೆ ಕರೆ ತರಲಾಯಿತು.</p>.<p>ಭಕ್ತರು ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಾದು ಕುಳಿತಿದ್ದರು.</p>.<p>ಪೂಜೆಯ ನಂತರ ದೇವಿಯ ಕೇಲು ಹೊತ್ತ ಇಬ್ಬರು ಪೂಜಾರಿಗಳು ದಾರಿಯುದ್ದಕ್ಕೂ ಮಲಗಿದ್ದ ಭಕ್ತರ ಮೈಮೇಲೆ ನಡೆಯುತ್ತ ಸಾಗಿದರು. ದೇಗುಲದವರೆಗೂ ಪೂಜಾರಿಯ ಪಾದ ನೆಲಕ್ಕೆ ಸೋಕದಂತೆ ಭಕ್ತರು ಮಲಗಿದ್ದರು.</p>.<p>ಪಾದಸ್ಪರ್ಶ ಸಿಗದ ಕೆಲ ಭಕ್ತರು ಪುನಃ ಮಲಗಿ ಬೆನ್ನು ತುಳಿಸಿಕೊಂಡರು. ದೀರ್ಘಕಾಲದಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರು ದಲಿತ ಪೂಜಾರಿಗಳ ಪಾದ ಸ್ಪರ್ಶ ಮಾಡಿಸಿಕೊಂಡರೆ ದೇವಿಯ ಪಾದ ಸ್ಪರ್ಶವಾದಷ್ಟೇ ಪುಣ್ಯ ಬರುತ್ತದೆ. ಇದರಿಂದ ಕಾಯಿಲೆ, ಕಷ್ಟ-ಕಾರ್ಪಣ್ಯ ದೂರವಾಗುತ್ತವೆ ಎಂಬ ನಂಬಿಕೆ ಭಕ್ತರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಚ್ಚಂಗಿದುರ್ಗ (ಬಳ್ಳಾರಿ ಜಿ.):</strong> ಸಮೀಪದ ಅರಸೀಕೆರೆ ಗ್ರಾಮದೇವತೆ ದಂಡಿನ ದುರ್ಗಮ್ಮ ದೇವಿ ಕಾರ್ತಿಕೋತ್ಸವದಲ್ಲಿ ಶನಿವಾರ ರಾತ್ರಿ 2.30ಕ್ಕೆ ನಡೆದ ಹೊಳೆ ಪೂಜೆಯಲ್ಲಿ ದಲಿತ ಪೂಜಾರಿಗಳ ಪಾದಸ್ಪರ್ಶಕ್ಕಾಗಿ ಭಕ್ತರು ಮುಗಿಬಿದ್ದರು.</p>.<p>ಕೋವಿಡ್ ಕಾರಣದಿಂದ ಜನ ಸೇರುವುದನ್ನು ತಡೆಯಲು ದೇವಿ ಉತ್ಸವಮೂರ್ತಿಯನ್ನು ತಡರಾತ್ರಿ 2.30ಕ್ಕೆ ತಿಮಲಾಪುರದ ಬಳಿ ಮಂಗಳವಾದ್ಯ ಗಳೊಂದಿಗೆ ಗಂಗಾ ಪೂಜೆಗೆ ಕರೆ ತರಲಾಯಿತು.</p>.<p>ಭಕ್ತರು ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಾದು ಕುಳಿತಿದ್ದರು.</p>.<p>ಪೂಜೆಯ ನಂತರ ದೇವಿಯ ಕೇಲು ಹೊತ್ತ ಇಬ್ಬರು ಪೂಜಾರಿಗಳು ದಾರಿಯುದ್ದಕ್ಕೂ ಮಲಗಿದ್ದ ಭಕ್ತರ ಮೈಮೇಲೆ ನಡೆಯುತ್ತ ಸಾಗಿದರು. ದೇಗುಲದವರೆಗೂ ಪೂಜಾರಿಯ ಪಾದ ನೆಲಕ್ಕೆ ಸೋಕದಂತೆ ಭಕ್ತರು ಮಲಗಿದ್ದರು.</p>.<p>ಪಾದಸ್ಪರ್ಶ ಸಿಗದ ಕೆಲ ಭಕ್ತರು ಪುನಃ ಮಲಗಿ ಬೆನ್ನು ತುಳಿಸಿಕೊಂಡರು. ದೀರ್ಘಕಾಲದಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರು ದಲಿತ ಪೂಜಾರಿಗಳ ಪಾದ ಸ್ಪರ್ಶ ಮಾಡಿಸಿಕೊಂಡರೆ ದೇವಿಯ ಪಾದ ಸ್ಪರ್ಶವಾದಷ್ಟೇ ಪುಣ್ಯ ಬರುತ್ತದೆ. ಇದರಿಂದ ಕಾಯಿಲೆ, ಕಷ್ಟ-ಕಾರ್ಪಣ್ಯ ದೂರವಾಗುತ್ತವೆ ಎಂಬ ನಂಬಿಕೆ ಭಕ್ತರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>