ವಾರದ ಹಿಂದೆ ನದಿಗೆ ಮೂರು ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ನದಿ ತಟದ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಹಂಪಿ, ತಳವಾರಘಟ್ಟ ರಸ್ತೆಯಲ್ಲಿ ನೀರು ಉಕ್ಕಿ ಹರಿದಿತ್ತು. ವಿಜಯ ವಿಠಲ ದೇವಸ್ಥಾನಕ್ಕೆ ಹೋಗಲು ಪ್ರವಾಸಿಗರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಕೆಲ ಪ್ರವಾಸಿಗರನ್ನು ತೆಪ್ಪದ ಸಹಾಯದಿಂದ ಅಲ್ಲಿಂದ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿತ್ತು. ಈಗ ಅಂತಹ ಪರಿಸ್ಥಿತಿ ಇಲ್ಲ. ಎಲ್ಲವೂ ಮೊದಲಿನಂತೆ ಸಹಜ ಸ್ಥಿತಿಗೆ ಬಂದಿದ್ದು, ಪ್ರವಾಸಿಗರು ಎಲ್ಲೆಡೆ ಮುಕ್ತವಾಗಿ ಓಡಾಡುವಂತಾಗಿದೆ.