ಹೊಸಪೇಟೆ: ವಿಶ್ವ ಅಂಗವಿಕಲರ ದಿನವನ್ನು ಗುರುವಾರ ನಗರದಲ್ಲಿ ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸಿಫ್ ಸಸಿಗೆ ನೀರೆರೆದು, ‘ಅಂಗವಿಕಲರು ದೈಹಿಕವಾಗಿ ಊನರಾಗಿರಬಹುದು. ಆದರೆ, ಅವರು ಯಾರಿಗಿಂತ ಕಡಿಮೆಯಿಲ್ಲ. ಅನೇಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ’ ಎಂದರು.
‘ಅಂಗವಿಕಲರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಪಡೆದು ಮುಂದೆ ಬರಬೇಕು’ ಎಂದು ತಿಳಿಸಿದರು.
ಕ್ಲಬ್ ಅಧ್ಯಕ್ಷ ಗೊಗ್ಗ ವಿಶ್ವನಾಥ್, ತಹಶೀಲ್ದಾರ್ ಎಚ್. ವಿಶ್ವನಾಥ್, ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಶೇಷಾ ವಲಿ, ಉದ್ಯಮಿ ಶ್ರೀನಿವಾಸ ಇದ್ದರು.