ಅಂದಿನ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರ ನೇತೃತ್ವದಲ್ಲಿ ನಡೆದ ಮ್ಯಾಜಿಸ್ಟ್ರಿಯಲ್ ತನಿಖೆಯು ಜಿಲ್ಲಾಮಟ್ಟದ ಅಧಿಕಾರಿಗಳ ಕರ್ತವ್ಯ ಲೋಪವೇ ಗಲಭೆಗೆ ಕಾರಣವೆಂದು ಬೊಟ್ಟು ಮಾಡಿತ್ತು. ಜತೆಗೆ, ದಕ್ಷಿಣ ವಲಯದ ಐಜಿಪಿ ಬಿ.ಕೆ.ಸಿಂಗ್ ಅವರು ಅಂದಿನ ಡಿಜಿಪಿ ಓಂಪ್ರಕಾಶ್ ಅವರಿಗೆ ಎಸ್ಪಿ
ವಿರುದ್ಧ ವರದಿ ನೀಡಿದ್ದರು. ಆ ವರದಿಯನ್ನು ಗೃಹ ಇಲಾಖೆಯು ಕೈಬಿಟ್ಟಿದ್ದು, ಏಪ್ರಿಲ್ 26ರಂದು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.