<p><strong>ಬಳ್ಳಾರಿ: ‘</strong>ಹದಿನಾರು ಶಾಸಕರು, ಇಬ್ಬರು ಸಂಸದರಿರುವ ಬೃಹತ್ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಲು ಮುಂದಾಗದ ಸರ್ಕಾರ, ಅವಶ್ಯಕತೆಯೇ ಇಲ್ಲದಿದ್ದರೂ ಆನಂದ್ಸಿಂಗ್ ಅವರ ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಲು ಹೊರಟಿದೆ’ ಎಂದು ಕುಡುತಿನಿ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಬುಧವಾರ ಸಂಜೆ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಬರಲು ಕಾರಣರಾದರೆಂಬ ಕಾರಣಕ್ಕೆ, ಆನಂದ್ಸಿಂಗ್ ಅವರ ಸ್ವಾರ್ಥದಿಂದ ಹೊಸ ಜಿಲ್ಲೆ ರಚನೆಯಾಗಿದೆ. ರಾಜಕೀಯ ದುರುದ್ದೇಶಕ್ಕಾಗಿ ಜಿಲ್ಲೆ ವಿಭಜಿಸುವುದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.</p>.<p>‘ಮೊದಲು ಬೆಳಗಾವಿ ವಿಭಜಿಸಿ. ನಂತರ ಬಳ್ಳಾರಿ ಕಡೆಗೆ ಬನ್ನಿ. ಏಕೀಕರಣ ಹೋರಾಟಕ್ಕೆ ಮುನ್ನುಡಿ ಬರೆದ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿದರೆ ಚರಿತ್ರೆಗೆ ಅಪಚಾರ ಮಾಡಿದಂತೆ’ ಎಂದು ತುಂಗಭದ್ರಾ ರೈತ ಸಂಘದ ಮುಖಂಡ ದರೂರು ಪುರುಷೋತ್ತಮಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವುದರ ಬದಲಿಗೆ, ಹೊಸ ವಿಜಯನಗರ ಜಿಲ್ಲೆಗೇ ಬಳ್ಳಾರಿಯನ್ನೂ ಸೇರಿಸಿಬಿಡಿ’ ಎಂದು ಬಂಡ್ರಾಳ್ ಮೃತ್ಯುಂಜಯ ಸ್ವಾಮಿ ವ್ಯಂಗ್ಯವಾಡಿದರು.</p>.<p>‘ಬಳ್ಳಾರಿ ಜಿಲ್ಲಾ ಕೇಂದ್ರ, ಗ್ರಾಮಾಂತರ ಪ್ರದೇಶ, ಸಿರುಗುಪ್ಪ ಸೇರಿದಂತೆ ಎಲ್ಲವನ್ನೂ ಅಲ್ಲಿಗೇ ಸೇರಿಸಿ’ ಎಂದು ಬಿಸ್ಲಳ್ಳಿ ಬಸವರಾಜು ಆಗ್ರಹಿಸಿದರು.</p>.<p>ಗಣಿ ಉದ್ಯಮಿ ಟಪಾಲ್ ಗಣೇಶ್, ‘ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕಾದ ಸಂದರ್ಭದಲ್ಲಿ ಜಿಲ್ಲೆಯ ಜನರೆಲ್ಲರೂ ಒಗ್ಗೂಡಬೇಕಾಗಿದೆ. ಅಹಿಂಸಾತ್ಮಕವಾಗಿಯೇ ಹೋರಾಟ ವನ್ನು ಹಮ್ಮಿಕೊಳ್ಳಬೇಕು. ಹಿಂದಿನ ವರ್ಷ ಗಟ್ಟಿ ಹೋರಾಟವನ್ನು ನಡೆಸಿದ ಪರಿಣಾಮವಾಗಿಯೇ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಟ್ಟಿತ್ತು. ಈ ಬಾರಿಯೂ ಸರ್ಕಾರದ ನಿರ್ಧಾರವನ್ನು ಬದಲಿಸಬೇಕು’ ಎಂದರು.</p>.<p>‘ಹೊಸಪೇಟೆಯ ಗ್ರಾಮ ಪಂಚಾಯ್ತಿಗಳ ಯಾವೊಬ್ಬ ಸದಸ್ಯರೂ ತಮಗೆ ವಿಜಯನಗರ ಜಿಲ್ಲೆ ಬೇಕೆಂದು ಹೇಳಿಲ್ಲ. ಆದರೆ ಆನಂದ್ಸಿಂಗ್ ಕೇಳಿದರೆಂಬ ಮಾತ್ರಕ್ಕೇ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಜಿಲ್ಲೆ ಘೋಷಿಸುವುದು ಎಳ್ಳಷ್ಟೂ ಸರಿಯಲ್ಲ’ ಎಂದು ರೈತ ಮುಖಂಡ ಗಂಗಾವತಿ ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜೆಡಿಎಸ್ ವಿಜಯಕುಮಾರ್, ಚಾನಾಳ್ ಶೇಖರ್, ಸಿದ್ಮಲ್ ಮಂಜುನಾಥ್ ಮಾತನಾಡಿ, ‘ವಿಭಜನೆ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲವಾದರೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಕೊಳಗಲ್ ಆಂಜಿನಪ್ಪ, ಪಂಪಾಪತಿ, ಅನಿಲ್, ರೆಹಮಾನ್, ಕೃಷ್ಣಪ್ಪ, ಶ್ರೀಧರ್, ವೀರೇಶ್, ಅಬೀಬ್ ಪಾಷಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: ‘</strong>ಹದಿನಾರು ಶಾಸಕರು, ಇಬ್ಬರು ಸಂಸದರಿರುವ ಬೃಹತ್ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಲು ಮುಂದಾಗದ ಸರ್ಕಾರ, ಅವಶ್ಯಕತೆಯೇ ಇಲ್ಲದಿದ್ದರೂ ಆನಂದ್ಸಿಂಗ್ ಅವರ ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಲು ಹೊರಟಿದೆ’ ಎಂದು ಕುಡುತಿನಿ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಬುಧವಾರ ಸಂಜೆ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಬರಲು ಕಾರಣರಾದರೆಂಬ ಕಾರಣಕ್ಕೆ, ಆನಂದ್ಸಿಂಗ್ ಅವರ ಸ್ವಾರ್ಥದಿಂದ ಹೊಸ ಜಿಲ್ಲೆ ರಚನೆಯಾಗಿದೆ. ರಾಜಕೀಯ ದುರುದ್ದೇಶಕ್ಕಾಗಿ ಜಿಲ್ಲೆ ವಿಭಜಿಸುವುದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.</p>.<p>‘ಮೊದಲು ಬೆಳಗಾವಿ ವಿಭಜಿಸಿ. ನಂತರ ಬಳ್ಳಾರಿ ಕಡೆಗೆ ಬನ್ನಿ. ಏಕೀಕರಣ ಹೋರಾಟಕ್ಕೆ ಮುನ್ನುಡಿ ಬರೆದ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿದರೆ ಚರಿತ್ರೆಗೆ ಅಪಚಾರ ಮಾಡಿದಂತೆ’ ಎಂದು ತುಂಗಭದ್ರಾ ರೈತ ಸಂಘದ ಮುಖಂಡ ದರೂರು ಪುರುಷೋತ್ತಮಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವುದರ ಬದಲಿಗೆ, ಹೊಸ ವಿಜಯನಗರ ಜಿಲ್ಲೆಗೇ ಬಳ್ಳಾರಿಯನ್ನೂ ಸೇರಿಸಿಬಿಡಿ’ ಎಂದು ಬಂಡ್ರಾಳ್ ಮೃತ್ಯುಂಜಯ ಸ್ವಾಮಿ ವ್ಯಂಗ್ಯವಾಡಿದರು.</p>.<p>‘ಬಳ್ಳಾರಿ ಜಿಲ್ಲಾ ಕೇಂದ್ರ, ಗ್ರಾಮಾಂತರ ಪ್ರದೇಶ, ಸಿರುಗುಪ್ಪ ಸೇರಿದಂತೆ ಎಲ್ಲವನ್ನೂ ಅಲ್ಲಿಗೇ ಸೇರಿಸಿ’ ಎಂದು ಬಿಸ್ಲಳ್ಳಿ ಬಸವರಾಜು ಆಗ್ರಹಿಸಿದರು.</p>.<p>ಗಣಿ ಉದ್ಯಮಿ ಟಪಾಲ್ ಗಣೇಶ್, ‘ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕಾದ ಸಂದರ್ಭದಲ್ಲಿ ಜಿಲ್ಲೆಯ ಜನರೆಲ್ಲರೂ ಒಗ್ಗೂಡಬೇಕಾಗಿದೆ. ಅಹಿಂಸಾತ್ಮಕವಾಗಿಯೇ ಹೋರಾಟ ವನ್ನು ಹಮ್ಮಿಕೊಳ್ಳಬೇಕು. ಹಿಂದಿನ ವರ್ಷ ಗಟ್ಟಿ ಹೋರಾಟವನ್ನು ನಡೆಸಿದ ಪರಿಣಾಮವಾಗಿಯೇ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಟ್ಟಿತ್ತು. ಈ ಬಾರಿಯೂ ಸರ್ಕಾರದ ನಿರ್ಧಾರವನ್ನು ಬದಲಿಸಬೇಕು’ ಎಂದರು.</p>.<p>‘ಹೊಸಪೇಟೆಯ ಗ್ರಾಮ ಪಂಚಾಯ್ತಿಗಳ ಯಾವೊಬ್ಬ ಸದಸ್ಯರೂ ತಮಗೆ ವಿಜಯನಗರ ಜಿಲ್ಲೆ ಬೇಕೆಂದು ಹೇಳಿಲ್ಲ. ಆದರೆ ಆನಂದ್ಸಿಂಗ್ ಕೇಳಿದರೆಂಬ ಮಾತ್ರಕ್ಕೇ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಜಿಲ್ಲೆ ಘೋಷಿಸುವುದು ಎಳ್ಳಷ್ಟೂ ಸರಿಯಲ್ಲ’ ಎಂದು ರೈತ ಮುಖಂಡ ಗಂಗಾವತಿ ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜೆಡಿಎಸ್ ವಿಜಯಕುಮಾರ್, ಚಾನಾಳ್ ಶೇಖರ್, ಸಿದ್ಮಲ್ ಮಂಜುನಾಥ್ ಮಾತನಾಡಿ, ‘ವಿಭಜನೆ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲವಾದರೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಕೊಳಗಲ್ ಆಂಜಿನಪ್ಪ, ಪಂಪಾಪತಿ, ಅನಿಲ್, ರೆಹಮಾನ್, ಕೃಷ್ಣಪ್ಪ, ಶ್ರೀಧರ್, ವೀರೇಶ್, ಅಬೀಬ್ ಪಾಷಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>