<p><strong>ಬಳ್ಳಾರಿ: </strong>ರಾಜ್ಯ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಸಮಾವೇಶವು ಜ.23. ರಂದು ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಶಿವಣ್ಣ ತಿಳಿಸಿದರು.</p>.<p>'ಜಿಲ್ಲಾ ಮಟ್ಟದ ಸಮಾವೇಶದ ಜೊತೆಗೆ, ಪ್ರತಿಭಾ ಪುರಸ್ಕಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣವೂ ನಡೆಯಲಿದೆ' ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>'ಅಂದು ಬೆಳಿಗ್ಗೆ 11 ಗಂಟೆಗೆ ನಲ್ಲಚೆರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ನಡೆವ ಸಮಾರಂಭಕ್ಕೆ ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಗೋಲಪಲ್ಲಿಯ ವರದಾನೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸಮಾವೇಶ ಉದ್ಘಾಟಿಸಲಿದ್ದಾರೆ' ಎಂದರು.</p>.<p>'ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ 2 ಸಾವಿರ ನೌಕರರಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ಕೆಎಎಸ್, ಒಬ್ಬರು ಐಎಎಸ್ ಅಧಿಕಾರಿ ಸೇರಿ 200 ಮಂದಿಯನ್ನು ಸನ್ಮಾನಿಸಲಾಗುವುದು' ಎಂದರು.</p>.<p>'ವಾಲ್ಮೀಕಿ ಸಮುದಾಯ ಉನ್ನತ ಶಿಕ್ಷಣದಲ್ಲಿ ಕೇವಲ ಶೇ 6 ರಷ್ಟು ಮಾತ್ರ ಪ್ರಗತಿ ಸಾಧಿಸಿದ್ದು, ಶಿಕ್ಷಣಕ್ಕೆ ಸಂಘವು ಹೆಚ್ಚು ಒತ್ತು ನೀಡಲಿದೆ' ಎಂದು ಹೇಳಿದರು.</p>.<p>ಸಂಘದ ಗೌರವಾಧ್ಯಕ್ಷ ಎಂ.ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ರಾಜ್ಯ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಸಮಾವೇಶವು ಜ.23. ರಂದು ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಶಿವಣ್ಣ ತಿಳಿಸಿದರು.</p>.<p>'ಜಿಲ್ಲಾ ಮಟ್ಟದ ಸಮಾವೇಶದ ಜೊತೆಗೆ, ಪ್ರತಿಭಾ ಪುರಸ್ಕಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣವೂ ನಡೆಯಲಿದೆ' ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>'ಅಂದು ಬೆಳಿಗ್ಗೆ 11 ಗಂಟೆಗೆ ನಲ್ಲಚೆರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ನಡೆವ ಸಮಾರಂಭಕ್ಕೆ ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಗೋಲಪಲ್ಲಿಯ ವರದಾನೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸಮಾವೇಶ ಉದ್ಘಾಟಿಸಲಿದ್ದಾರೆ' ಎಂದರು.</p>.<p>'ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ 2 ಸಾವಿರ ನೌಕರರಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ಕೆಎಎಸ್, ಒಬ್ಬರು ಐಎಎಸ್ ಅಧಿಕಾರಿ ಸೇರಿ 200 ಮಂದಿಯನ್ನು ಸನ್ಮಾನಿಸಲಾಗುವುದು' ಎಂದರು.</p>.<p>'ವಾಲ್ಮೀಕಿ ಸಮುದಾಯ ಉನ್ನತ ಶಿಕ್ಷಣದಲ್ಲಿ ಕೇವಲ ಶೇ 6 ರಷ್ಟು ಮಾತ್ರ ಪ್ರಗತಿ ಸಾಧಿಸಿದ್ದು, ಶಿಕ್ಷಣಕ್ಕೆ ಸಂಘವು ಹೆಚ್ಚು ಒತ್ತು ನೀಡಲಿದೆ' ಎಂದು ಹೇಳಿದರು.</p>.<p>ಸಂಘದ ಗೌರವಾಧ್ಯಕ್ಷ ಎಂ.ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>