ಸಮಾಜ ವಿಜ್ಞಾನ ನಿಕಾಯದ ಡೀನ್ ಕೆ.ಕೇಶವನ್ ಪ್ರಸಾದ್ ಮಾತನಾಡಿ, ‘ಕನ್ನಡ ವಿಶ್ವವಿದ್ಯಾಲಯ ದೇಶದ ಪ್ರಥಮ ಸಂಶೋಧನ ವಿಶ್ವವಿದ್ಯಾಲಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂದಿನ ಕಾಲದಲ್ಲ್ಲಿ ಶಂಬಾ ಜೋಶಿ, ಎಂ.ಎಂ. ಕಲಬುರ್ಗಿ, ಚಿದಾನಂದಮೂರ್ತಿ ಅಂತಹ ಹಿರಿಯ ಸಂಶೋಧಕರು ತಮ್ಮನ್ನು ತಾವು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಈ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯ ನಾಡಿನ ಎಲ್ಲ ಸಮರ್ಥ ವಿದ್ವಾಂಸರನ್ನು ಕರೆಯಿಸಿ ಸಂಶೋಧನೆ ಮಾಡಿಸುವ ಮೂಲಕ ಜಗತ್ತಿನಲ್ಲಿಯೇ ಇದೊಂದು ವಿಶಿಷ್ಟ ವಿಶ್ವವಿದ್ಯಾಲಯವಾಗಿ ರೂಪುಗೊಂಡಿದೆ’ ಎಂದು ಹೇಳಿದರು.